ಬೆಳ್ಳಾರೆ ಕೆಪಿಎಸ್ ನಲ್ಲಿ ಸುದ್ದಿ ಸಮೂಹ ಸಂಸ್ಥೆ ವತಿಯಿಂದ ನಡೆದ ಪ್ರಬಂಧ ಸ್ಪರ್ಧೆಯ ಬಹುಮಾನ ವಿತರಣೆ

0

ಸುದ್ದಿ ಸಮೂಹ ಸಂಸ್ಥೆ ,ಷರಾ ಪ್ರಕಾಶನ ಸುಳ್ಯ ಸಹಯೋಗದಲ್ಲಿ ಸ್ವಾತಂತ್ರ್ಯೋತ್ಸವ ಸಂಭ್ರಮದ ಅಂಗವಾಗಿ ಶಾಲಾ ವಿದ್ಯಾರ್ಥಿಗಳಿಗೆ ನಡೆಸಿದ ಪ್ರಬಂದ ಸ್ಪರ್ಧೆಯ ಬಹುಮಾನ ವಿತರಣಾ ಕಾರ್ಯಕ್ರಮವು ಬೆಳ್ಳಾರೆ ಕೆಪಿಎಸ್ ನಲ್ಲಿ ಆ.22 ರಂದು ನಡೆಯಿತು.


ಶಾಲಾ ಎಸ್.ಡಿ.ಎಂ.ಸಿ.ಉಪಾಧ್ಯಕ್ಷ ಶ್ರೀನಾಥ ರೈ ಬಾಳಿಲ ಸ್ಪರ್ಧೆಯ ವಿಜೇತರಿಗೆ ಬಹುಮಾನ ವಿತರಣೆ
ಮಾಡಿದರು.


ಈ ಸಂದರ್ಭದಲ್ಲಿ ಕೆಪಿಎಸ್ ಉಪಪ್ರಾಂಶುಪಾಲರಾದ ಉಮಾ ಕುಮಾರಿ, ಪ್ರದೀಪ್ ಕುಮಾರ್ ರೈ ಪನ್ನೆ,ಸುದ್ದಿ ಚಾನೆಲ್ ಮುಖ್ಯಸ್ಥ ದುರ್ಗಾಕುಮಾರ್ ನಾಯರ್ ಕೆರೆ, ಸುದ್ದಿ ಪತ್ರಿಕೆಯ ವರದಿಗಾರರಾದ ಗಣೇಶ್ ಕುಕ್ಕುದಡಿ,ಕುಶಾಂತ್ ಕೊರತ್ಯಡ್ಕ ಉಪಸ್ಥಿತರಿದ್ದರು.