ದುಗ್ಗಲಡ್ಕ ಪ್ರೌಢಶಾಲೆಯಲ್ಲಿ ಸುದ್ದಿ ಸಮೂಹ ಸಂಸ್ಥೆ ವತಿಯಿಂದ ನಡೆದ ಭಾಷಣ ಸ್ಪರ್ಧೆಯ ಬಹುಮಾನ ವಿತರಣೆ

0

ಸುದ್ದಿ ಸಮೂಹ ಸಂಸ್ಥೆ, ಷರಾ ಪ್ರಕಾಶನ ಸುಳ್ಯ ಸಹಯೋಗದಲ್ಲಿ ಸ್ವಾತಂತ್ರ್ಯೋತ್ಸವ ಸಂಭ್ರಮದ ಅಂಗವಾಗಿ ಶಾಲಾ ವಿದ್ಯಾರ್ಥಿಗಳಿಗೆ ನಡೆಸಿದ ಭಾಷಣ ಸ್ಪರ್ಧೆಯ ಬಹುಮಾನ ವಿತರಣಾ ಕಾರ್ಯಕ್ರಮವು ದುಗ್ಗಲಡ್ಕ ಸರಕಾರಿ ಪ್ರೌಢಶಾಲೆಯಲ್ಲಿ ಇಂದು (ಆ.23)ನಡೆಯಿತು.


ಶಾಲಾ ಮುಖ್ಯಶಿಕ್ಷಕ ಸುರೇಶ್ ಕುಮಾರ್ ಸ್ಪರ್ಧೆಯ ವಿಜೇತರಿಗೆ ಬಹುಮಾನ ವಿತರಣೆ ಮಾಡಿದರು.


ಈ ಸಂದರ್ಭದಲ್ಲಿ ಶಾಲಾ ಶಿಕ್ಷಕ ವೃಂದದವರು ಉಪಸ್ಥಿತರಿದ್ದರು. ಕಾರ್ಯಕ್ರಮ ಸಂಯೋಜಕ ದಯಾನಂದ ಕೊರತ್ತೋಡಿ ಮಾತನಾಡಿದರು.ಸುದ್ದಿ ಪತ್ರಿಕೆಯ ವರದಿಗಾರರಾದ ರಮೇಶ್ ನೀರಬಿದಿರೆ ಮತ್ತು ಕೆ‌‌.ಟಿ.ಬಾಗೀಶ್ ಉಪಸ್ಥಿತರಿದ್ದರು. ಶಿಕ್ಷಕ ಉನ್ನಿಕೃಷ್ಣನ್ ವಂದಿಸಿದರು.