ಕೆವಿಜಿ ಡೆಂಟಲ್ ಕಾಲೇಜಿನಲ್ಲಿ ಕುರುಂಜಿ ಜಾನಕಿ ವೆಂಕಟ್ರಮಣ ಗೌಡರವರ 11ನೇ ವರ್ಷದ ಪುಣ್ಯಸ್ಮರಣೆ

0

ಸುಳ್ಯ ಕೆ.ವಿ.ಜಿ. ದಂತ ಮಹಾವಿದ್ಯಾಲಯ ಮತ್ತು ಆಸ್ಪತ್ರೆಯಲ್ಲಿ ಆ.22 ರಂದು ಶ್ರೀಮತಿ ಕುರುಂಜಿ ಜಾನಕಿ ವೆಂಕಟ್ರಮಣ ಗೌಡರವರ 11ನೇ ವರ್ಷದ ಭಾವಪೂರ್ಣ ಪುಣ್ಯಸ್ಮರಣೆ ನಡೆಯಿತು.

ಕೆ.ವಿ.ಜಿ. ದಂತ ಮಹಾವಿದ್ಯಾಲಯ ಸ್ನಾತಕೋತ್ತರ ಅಧ್ಯಯನ ವಿಭಾಗದ ನಿರ್ದೇಶಕರಾದ ಡಾ| ಶರತ್‌ಕುಮಾರ್ ಶೆಟ್ಟಿ ಹಾಗೂ ಎಲ್ಲಾ ವಿಭಾಗ ಮುಖ್ಯಸ್ಥರು, ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳು, ವಿದ್ಯಾರ್ಥಿಗಳು ಉಪಸ್ಥಿತರಿದ್ದು, ಭಾವಚಿತ್ರಕ್ಕೆ ಹೂ ಹಾರ ಹಾಕಿ ನಮಿಸಿ, ಪುಣ್ಯಸ್ಮರಣೆ ಮಾಡಿ ಅವರ ಆದರ್ಶಗಳನ್ನು ಸ್ಮರಿಸಿದರು.