ಕೆ.ಎಸ್.ಜಿ. ಹಿ.ಪ್ರಾ.ಶಾಲೆಯಲ್ಲಿ ಸುದ್ದಿ ಸಮೂಹ ಸಂಸ್ಥೆ ಮತ್ತು ಷರಾ ಪ್ರಕಾಶನದ ವತಿಯಿಂದ ನಡೆದ ಪ್ರಬಂಧ ಸ್ಪರ್ಧೆಯ ಬಹುಮಾನ ವಿತರಣೆ

0

ಲಂಚ, ಭ್ರಷ್ಟಾಚಾರ ವಿರುದ್ಧ ಮತದಾನ ಜಾಗೃತಿ ಪ್ರತಿಜ್ಞೆ ಸ್ವೀಕಾರ

ಸುದ್ದಿ ಸಮೂಹ ಸಂಸ್ಥೆ, ಷರಾ ಪ್ರಕಾಶನ ಸುಳ್ಯ ಸಹಯೋಗದಲ್ಲಿ ಸ್ವಾತಂತ್ರ್ಯೋತ್ಸವ ಸಂಭ್ರಮದ ಅಂಗವಾಗಿ ಶಾಲಾ ವಿದ್ಯಾರ್ಥಿಗಳಿಗೆ ನಡೆಸಿದ ಪ್ರಬಂದ ಸ್ಪರ್ಧೆಯ ಬಹುಮಾನ ವಿತರಣಾ ಕಾರ್ಯಕ್ರಮವು ಕೆ. ಎಸ್. ಜಿ. ಹಿ.ಪ್ರಾ.ಶಾಲೆಯಲ್ಲಿ ಆ.24 ರಂದು ನಡೆಯಿತು.

ಸುದ್ದಿ ಬಿಡುಗಡೆ ಪತ್ರಿಕೆಯ ಮುಖ್ಯ ವರದಿಗಾರರು ಹರೀಶ್ ಬಂಟ್ವಾಳ್ ಪ್ರಸ್ತಾವಿಕವಾಗಿ ಮಾತನಾಡಿದರು. ಶಾಲಾ ಮುಖ್ಯ ಗುರು ಶಾಲಾ ಮುಖ್ಯ ಶಿಕ್ಷಕ ಉಮೇಶ್ ಗೌಡ ಹೇಮಳ ರವರು ಬಹುಮಾನ ವಿತರಿಸಿದರು.

ಈ ಸಂದರ್ಭದಲ್ಲಿ ಸುದ್ದಿ ಕಚೇರಿ ವ್ಯವಸ್ಥಾಪಕ ಯಶ್ವಿತ್ ಕಾಳಮ್ಮನೆ, ಪತ್ರಿಕೆಯ ವರದಿಗಾರರಾದ ಈಶ್ವರ್ ವಾರಣಸಿ, ಕುಶಾಂತ್ ಕೊರತ್ಯಡ್ಕ ಹಾಗೂ ಶಾಲಾ ಶಿಕ್ಷಕ ವರ್ಗದವರು ಉಪಸ್ಥಿತರಿದ್ದರು. ಉಪನ್ಯಾಸಕ ಉಜ್ವಲ್ ಕೆ. ಎಚ್ ವಂದಿಸಿದರು.

ಸಂಸ್ಥೆಯ ವಿದ್ಯಾರ್ಥಿಗಳು ಲಂಚ, ಭ್ರಷ್ಟಾಚಾರ ವಿರುದ್ಧ ಮತದಾನ ಜಾಗೃತಿ ಪ್ರತಿಜ್ಞೆ ಸ್ವೀಕರಿಸಿದರು.