ಸುಳ್ಯ ಶ್ರೀ ಶಾರದಾ ಮಹಿಳಾ‌ ಪಿ.ಯು. ಕಾಲೇಜು ಶಿಕ್ಷಕ ರಕ್ಷಕರ ಸಂಘದ ಸಭೆ

0

ಸುಳ್ಯದ ಶ್ರೀ ಶಾರದಾ ಮಹಿಳಾ ಪದವಿ ಪೂರ್ವ ಕಾಲೇಜಿನಲ್ಲಿ ಆಗಸ್ಟ್ 23ರಂದು ಶಿಕ್ಷಕ ಮತ್ತು ರಕ್ಷಕರ ಸಭೆ ನಡೆಯಿತು.

ಸಭೆಯ ಅಧ್ಯಕ್ಷತೆಯನ್ನು ದಕ್ಷಿಣ ಕನ್ನಡ ಗೌಡ ವಿದ್ಯಾಸಂಘದ ಅಧ್ಯಕ್ಷರಾದ ಧನಂಜಯ ಅಡ್ಪಂಗಾಯ ರವರು ವಹಿಸಿದರು. ಸಂಸ್ಥೆಯ ಪ್ರಾಂಶುಪಾಲರಾದ ಶ್ರೀಮತಿ ದಯಾಮಣಿ.ಕೆ. ಪ್ರಾಸ್ತಾವಿಕ ಮಾತನಾಡಿ ವಿದ್ಯಾರ್ಥಿನಿಯರ ಹೆತ್ತವರಿಗೆ ಸಲಹೆ ಸೂಚನೆಗಳನ್ನು ನೀಡಿದರು.

ಈ ಸಂದರ್ಭದಲ್ಲಿ ಶಿಕ್ಷಕ ರಕ್ಷಕ ಸಮಿತಿಗೆ ಅಧ್ಯಕ್ಷರಾಗಿ ದಿವೀಶ್ ಕುಮಾರ್ ಮುರುಳ್ಯ ಹಾಗೂ ಕಾರ್ಯದರ್ಶಿಯಾಗಿ ಶ್ರೀಮತಿ ದಿವ್ಯ ರವರು ಆಯ್ಕೆಯಾದರು. ಉಪನ್ಯಾಸಕಿ ಶ್ರೀಮತಿ ಸ್ವರ್ಣಕಲಾ ಎ. ಎಸ್ ಸ್ವಾಗತಿಸಿ, ಉಪನ್ಯಾಸಕ ದಯಾನಂದ ಒ.ಡಿ.ವಂದಿಸಿದರು ಉಪನ್ಯಾಸಕ ದಾಮೋದರ. ಎನ್. ಕಾರ್ಯಕ್ರಮ ನಿರೂಪಿಸಿದರು.