ಅಜ್ಜಾವರ : ವರಮಹಾಲಕ್ಷ್ಮಿ ಪೂಜೆ – ರಕ್ಷಾ ಬಂಧನ

0

ಅಜ್ಜಾವರ ಶ್ರೀ ವರಮಹಾಲಕ್ಷ್ಮಿ ಪೂಜಾ ಸಮಿತಿ ಇದರ ವತಿಯಿಂದ 13ನೇ ವರ್ಷದ ಸಾಮೂಹಿಕ ವರಮಹಾಲಕ್ಷ್ಮಿ ಪೂಜೆಯು ಶಂಕರ ಭಾರತಿ ವೇದ ಪಾಠ ಶಾಲೆ ಬಯಂಬು ಅಜ್ಜಾವರದಲ್ಲಿ ಆರ್ಚಕರಾದ ಸದಾನಂದ ಶಾಸ್ತ್ರೀಯವರ ನೇತೃತ್ವದಲ್ಲಿ ನಡೆಯಿತು.

ಕಾರ್ಯಕ್ರಮದಲ್ಲಿ ವರಮಹಾಲಕ್ಷ್ಮಿ ಪೂಜಾ ಸಮಿತಿ ಮತ್ತು ಅಜ್ಜಾವರ ದುರ್ಗಾ ಪರಮೇಶ್ವರಿ ಭಜನಾ ಮಂಡಳಿಯಿಂದ ಭಜನಾ ಕಾರ್ಯಕ್ರಮ ನಡೆಯಿತು. ನಂತರ ರಕ್ಷಾಬಂಧನ ಕಾರ್ಯಕ್ರಮ ನಡೆಯಿತು ರಕ್ಷಾಬಂಧನದ ಮಹತ್ವವನ್ನು ಶ್ರೀಮತಿ ವಿಶಾಲ ಸೀತಾರಾಮ ಕರ್ಲಪಾಡಿ ಇವರು ತಿಳಿಸಿದರು. ನಂತರ ಮಹಾಪೂಜೆ ನಡೆದು ಪ್ರಸಾದ ವಿತರಣೆ,ಅನ್ನಸಂತರ್ಪಣೆ ನಡೆಯಿತು.

ಕ್ಷೀರ ಪ್ರಸಾದವನ್ನು ಅಜ್ಜಾವರದ ಕೈರಾಳಿ ಹೋಟೆಲ್ ಮಾಲಕರಾದ ಶಿವರಾಮ ಅತ್ಯಾಡಿಯವರು ನೀಡಿ ಸಹಕರಿಸಿದರು. ಕಾರ್ಯಕ್ರಮದಲ್ಲಿ ಭಾಸ್ಕರ್ ರಾವ್ ಬಯಂಬು, ಕರುಣಾಕರ ಅಡ್ಪಂಗಾಯ, ಸುಬೋದ್ ಶೆಟ್ಟಿ ಮೇನಾಲ, ರಾಜೇಶ್ ಶೆಟ್ಟಿ ಮೇನಾಲ, ಚನಿಯ ಕಲ್ತಡ್ಕ ,ಸವೇರಾ ರೈ ಬೇಲ್ಯ ಹಾಗೂ ಸಲಹಾ ಮಂಡಳಿಯ ಸದಸ್ಯರು, ಪೂಜಾ ಸಮಿತಿಯ ಸ್ಥಾಪಕಧ್ಯಕ್ಷರು, ಅಧ್ಯಕ್ಷರು ಹಾಗೂ ಪದಾಧಿಕಾರಿಗಳು, ಕಾರ್ಯಕಾರಿಣಿ ಸಮಿತಿ ಸದಸ್ಯರು ಮತ್ತು ಊರಿನ ಸಮಸ್ತ ಭಕ್ತಾದಿಗಳು ಆಗಮಿಸಿದರು.