ಆಲೆಟ್ಟಿ : ಶ್ರೀ ಕೃಷ್ಣ ಜನ್ಮಾಷ್ಠಮಿಯ ಆಮಂತ್ರಣ ಪತ್ರ ಬಿಡುಗಡೆ

0

ಆಲೆಟ್ಟಿ ಶ್ರೀ ಸದಾಶಿವ ದೇವಸ್ಥಾನದಲ್ಲಿ ಸೆ.6 ರಂದು ನಡೆಯಲಿರುವ
ಶ್ರೀ ಕೃಷ್ಣ ಜನ್ಮಾಷ್ಠಮಿ ಉತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆಯು ದೇವಸ್ಥಾನದ ವಠಾರದಲ್ಲಿ‌ ಆ.26 ರಂದು ನಡೆಯಿತು.

ದೇವಸ್ಥಾನದಅನುವಂಶಿಕ ಮೊಕ್ತೇಸರ ಹೇಮಚಂದ್ರ ಬೈಪಡಿತ್ತಾಯ ಆಮಂತ್ರಣವ ಪತ್ರ ಬಿಡುಗಡೆ ಗೊಳಿಸಿದರು. ಈ ಸಂದರ್ಭದಲ್ಲಿ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ತೀರ್ಥಕುಮಾರ್ ಕುಂಚಡ್ಕ,ಸೇವಾ ಸಮಿತಿ ಅಧ್ಯಕ್ಷ ಪುರುಷೋತ್ತಮ ಗೌಡಕೋಲ್ಚಾರು,
ಜೀರ್ಣೋದ್ಧಾರ ಸಮಿತಿ ಅಧ್ಯಕ್ಷಎನ್.ಎ.ರಾಮಚಂದ್ರ, ಭಜನಾ ಸಂಘದ ಅಧ್ಯಕ್ಷ ಅಚ್ಚುತ ಮಣಿಯಾಣಿ ಆಲೆಟ್ಟಿ ಹಾಗೂ ಎಲ್ಲಾ ಸಮಿತಿಯ ಸದಸ್ಯರು, ಸ್ಥಳೀಯ ಭಕ್ತಾದಿಗಳು ಭಾಗವಹಿಸಿದರು.