ಸುಳ್ಯ 55 ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ಆಮಂತ್ರಣ ಬಿಡುಗಡೆ

0

ಸುಳ್ಯ ಶ್ರೀ ಸಿದ್ಧಿವಿನಾಯಕ ಸೇವಾ ಸಮಿತಿ, ಸಾರ್ವಜನಿಕ ಶ್ರೀ ದೇವತಾರಾಧನಾ ಸಮಿತಿ ಇದರ ಆಶ್ರಯದಲ್ಲಿ ಸೆ.19 ರಿಂದ 23 ರವರೆಗೆ ನಡೆಯಲಿರುವ 55 ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಆ.26 ರಂದು ಸುಳ್ಯ ಚೆನ್ನಕೇಶವ ದೇವಸ್ಥಾನದಲ್ಲಿ ಬಿಡುಗಡೆ ಮಾಡಲಾಯಿತು.

ದೇವಸ್ಥಾನದ ಅರ್ಚಕರು ಪ್ರಾರ್ಥನೆ ನೆರವೇರಿಸಿ ದೇವರಿಗೆ ಪೂಜೆ ಸಲ್ಲಿಸಿದರು.

ಕಾಯರ್ತೋಡಿ ಶ್ರೀ ಮಹಾವಿಷ್ಣು ದೇವಸ್ಥಾನದ ವ್ಯ.ಸ.ಅಧ್ಯಕ್ಷ ಉಮೇಶ ಪಿ.ಕೆ ಯವರು ಆಮಂತ್ರಣ ಪತ್ರ ಬಿಡುಗಡೆಗೊಳಿಸಿ ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ಸಾರ್ವಜನಿಕ ದೇವತಾರಾಧನಾ ಸಮಿತಿ ಅಧ್ಯಕ್ಷ ಸೋಮನಾಥ ಪೂಜಾರಿ, ಮಾಜಿ ಅಧ್ಯಕ್ಷ ಗುರುದತ್ ಶೇಟ್ ಸುಳ್ಯ,
ಉಪಾಧ್ಯಕ್ಷ ಮಾಧವ ಗೌಡ ಮಡಪ್ಪಾಡಿ, ಸಾ.ದೇ.ಸಮಿತಿ ಮಹಿಳಾ ಘಟಕದ ಅಧ್ಯಕ್ಷೆ ಶ್ರೀಮತಿ ಲತಾ ಮಧುಸೂದನ್, ಖಜಾಂಜಿ ದಿನೇಶ್ ಕುಮಾರ್ ಕೆ.ಸಿ, ಭರತ್ ಪಿ.ಯು,ಜತೆಕಾರ್ಯದರ್ಶಿ ನಾರಾಯಣ ಶಾಂತಿನಗರ, ದಾಮೋದರ ಮಂಚಿ, ಜನಾರ್ದನ ದೋಳ, ಸೋಮನಾಥ ಕೇರ್ಪಳ ಮತ್ತಿತರರು ಉಪಸ್ಥಿತರಿದ್ದರು.