ದೇವಚಳ್ಳ ಶಾಲೆಗೆ ಸಂಭವ್ ಪೌಂಡೇಶನ್ ಕೊಡುಗೆಯಾಗಿ ನೀಡಿದ ಕಂಪ್ಯೂಟರ್ ಕಲಿಕಾ ತರಗತಿಯ ಅನಾವರಣ

0

ಪೂರ್ವ ಪ್ರಾಥಮಿಕ ಶಾಲೆಯ ಉದ್ಘಾಟನೆ

ದೇವಚಳ್ಳ ದ.ಕ.ಜಿ.ಪಂ. ಹಿರಿಯ ಪ್ರಾಥಮಿಕ ಶಾಲೆಗೆ ಬೆಂಗಳೂರಿನ ಸಂಭವ್ ಪೌಂಡೇಶನ್ ನವರು ಕೊಡುಗೆಯಾಗಿ ನೀಡಿದ ಕಂಪ್ಯೂಟರ್ ಗಳು ಹಾಗೂ ಕಂಪ್ಯೂಟರ್ ಕಲಿಕಾ ತರಗತಿಯ ಉದ್ಘಾಟನೆ ಆ. 29 ರಂದು ನಡೆಯಿತು. ಇದೇ ಸಂದರ್ಭದಲ್ಲಿ ಶಾಲೆಗೆ ಮಂಜೂರಾದ ಪೂರ್ವ ಪ್ರಾಥಮಿಕ ಶಾಲೆಯ ಉದ್ಘಾಟನೆಯೂ ನಡೆಯಿತು.

ಸುಳ್ಯದ ಕ್ಷೇತ್ರ ಶಿಕ್ಷಣಾಧಿಕಾರಿ ಬಿ.ಈ. ರಮೇಶ್ ಉದ್ಘಾಟನೆ ನೆರವೇರಿಸಿದರು. ದೇವಚಳ್ಳ ಗ್ರಾ.ಪಂ.ಉಪಾಧ್ಯಕ್ಷೆ ಶ್ರೀಮತಿ ಲೀಲಾವತಿ ಸೇವಾಜೆ ಅಧ್ಯಕ್ಷತೆ ವಹಿಸಿದ್ದರು.

ಇದೇ ಸಂದರ್ಭದಲ್ಲಿ ಕೊಡುಗೆ ನೀಡಿದ ಸಂಭವ್ ಫೌಂಡೇಶನ್ ಜನರಲ್ ಮ್ಯಾನೇಜರ್, ದೇವಚಳ್ಳ ಶಾಲೆಯ ಹಳೆ ವಿದ್ಯಾರ್ಥಿಯೂ ಆಗಿರುವ ಅಶ್ರಫ್ ಹರ್ಲಡ್ಕ ಅವರನ್ನು ಸನ್ಮಾನಿಸಲಾಯಿತು.

ನೆಲ್ಲೂರು ಕೆಮ್ರಾಜೆ ಗ್ರಾ.ಪಂ. ಉಪಾಧ್ಯಕ್ಷೆ ಶ್ರೀಮತಿ ವಂದನಾ ಹೊಸ್ತೋಟ, ಸುದ್ದಿ ಚಾನೆಲ್ ಮುಖ್ಯಸ್ಥ ದುರ್ಗಾಕುಮಾರ್ ನಾಯರ್ ಕೆರೆ, ಎಲಿಮಲೆ ಸರಕಾರಿ ಪ್ರೌಢ ಶಾಲಾ ಎಸ್.ಡಿ.ಎಂ.ಸಿ. ಕಾರ್ಯಾಧ್ಯಕ್ಷ ಜಯಂತ ಹರ್ಲಡ್ಕ, ದೇವಚಳ್ಳ ಶಾಲಾ ಎಸ್.ಡಿ.ಎಂ.ಸಿ.ಅಧ್ಯಕ್ಷ ಜಯಾನಂದ ಪಿ., ಮಹಮದ್ ಕುಂಞಿ ಹರ್ಲಡ್ಕ ಮುಖ್ಯ ಅತಿಥಿಗಳಾಗಿದ್ದರು.

ಶಾಲೆಯ ಮುಖ್ಯ ಶಿಕ್ಷಕ ಶ್ರೀಧರ ಗೌಡ ಕೆ. ಸ್ವಾಗತಿಸಿದರು. ದೈಹಿಕ ಶಿಕ್ಷಕಿ ಶ್ರೀಮತಿ ಚಿನ್ನಮ್ಮ‌ ವಂದಿಸಿದರು. ಶಿಕ್ಷಕ ಜೀವನ್ ತಳೂರು ಕಾರ್ಯಕ್ರಮ ನಿರೂಪಿಸಿದರು. ಕಂಪ್ಯೂಟರ್ ಶಿಕ್ಷಕಿ ಶ್ರೀಮತಿ ಪೂಜಾ ವೇದಿಕೆಯಲ್ಲಿ ಉಪಸ್ಥಿತರಿದ್ದರು.