ಸೋಣಂಗೇರಿ ಶಾಲೆಯಲ್ಲಿ ಸುದ್ದಿ ಸಮೂಹ ಸಂಸ್ಥೆ ಮತ್ತು ಷರಾ ಪ್ರಕಾಶನದ ವತಿಯಿಂದ ನಡೆದ ಪ್ರಬಂಧ ಸ್ಪರ್ಧೆಯ ಬಹುಮಾನ ವಿತರಣೆ

0

ಸ.ಉ.ಹಿ.ಪ್ರಾ. ಶಾಲೆ ಸೋಣಂಗೇರಿ ಇಲ್ಲಿ ಸುದ್ದಿ ಸಮೂಹ ಸಂಸ್ಥೆ ಮತ್ತು ಷರಾ ಪ್ರಕಾಶನದ ವತಿಯಿಂದ ಸ್ವಾತಂತ್ರೋತ್ಸವ ಸಂಭ್ರಮದ ಅಂಗವಾಗಿ ಶಾಲಾ ವಿದ್ಯಾರ್ಥಿಗಳಿಗೆ ನಡೆದ ಪ್ರಬಂಧ ಸ್ಪರ್ಧೆಯ ಬಹುಮಾನ ವಿತರಣೆ ಕಾರ್ಯಕ್ರಮ ಆ.೩೦ ರಂದು ನಡೆಯಿತು.
ಪ್ರಾಥಮಿಕ ವಿಭಾಗದ ಪ್ರಬಂಧ ಸ್ಪರ್ಧೆಯಲ್ಲಿ ಪ್ರಥಮ ಬಹುಮಾನವನ್ನು ವರ್ಷ ಎಂ.ಸಿ. ಹಾಗೂ ದ್ವಿತೀಯ ಬಹುಮಾನವನ್ನು ನಮೃತ ಗೌಡ ಕೆ.ಸಿ. ಪಡೆದುಕೊಂಡರು.

ಪ್ರೌಢ ವಿಭಾಗದ ಭಾಷಣ ಸ್ಪರ್ಧೆಯಲ್ಲಿ ಪ್ರಥಮ ಬಹುಮಾನ ಧನುಶ್ರೀ, ದ್ವಿತೀಯ ಬಹುಮಾನ ಮಹೇಶ್ ಪಡೆದುಕೊಂಡರು.
ವಿಜೇತ ವಿದ್ಯಾರ್ಥಿಗಳಿಗೆ ಶಾಲಾ ಮುಖ್ಯ ಶಿಕ್ಷಕಿ ಕುಸುಮಾವತಿ, ಶಿಕ್ಷಕಿಯರಾದ ಸವಿತಾ ಯು.ಆರ್., ಜಯಲಕ್ಷ್ಮಿ, ವೇದಾವತಿಯವರು ಬಹುಮಾನ ವಿತರಿಸಿದರು.

ಸುದ್ದಿ ಬಿಡುಗಡೆ ಪತ್ರಿಕೆಯ ವರದಿಗಾರ್ತಿ ಪೂಜಾಶ್ರೀ ವಿತೇಶ್ ಕೋಡಿ ಪತ್ರಿಕೆ, ಚಾನೆಲ್, ವೆಬ್‌ಸೈಟ್ , ಮಾಹಿತಿ ಹಾಗೂ ಕೃಷಿ ಕೇಂದ್ರದ ಕುರಿತು
ವಿದ್ಯಾರ್ಥಿಗಳಿಗೆ ತಿಳಿಸಿದರು.

ಸ್ಪರ್ಧೆಯಲ್ಲಿ ಭಾಗವಹಿಸಿದ ಎಲ್ಲಾ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪತ್ರ ವಿತರಿಸಲಾಯಿತು.
ಶಾಲೆಯ ವಿದ್ಯಾರ್ಥಿಗಳು, ಅಡುಗೆ ಸಿಬ್ಬಂದಿ ಈ ಸಂದರ್ಭ ಉಪಸ್ಥಿತರಿದ್ದರು.