ಎಡಮಂಗಲ ರಾಜ್ಯ ಸರಕಾರದ ಗೃಹಲಕ್ಷ್ಮಿ ಯೋಜನೆಯ ಅನುಷ್ಠಾನ ಕಾರ್ಯಕ್ರಮ

0

ಸಭಾಂಗಣದಲ್ಲಿ ಕಿಕ್ಕಿರಿದು ಸೇರಿದ ಮಹಿಳಾ ಫಲಾನುಭವಿಗಳು

ಕಾಂಗ್ರೆಸ್ ಸರಕಾರದ ಮಹಾತ್ವಕಾಂಕ್ಷಿ ಮಹಿಳಾ ಸಬಲೀಕರಣ ಯೋಜನೆಯಾದ ಗೃಹಲಕ್ಷ್ಮಿ ಅನುಷ್ಠಾನ ಕಾರ್ಯಕ್ರಮ ಇಂದು ರಾಜ್ಯದಾದ್ಯಂತ ಅನುಷ್ಠಾನಗೊಳ್ಳಲಿರುವ ಹಿನ್ನೆಲೆಯಲ್ಲಿ ಎಡಮಂಗಲ ಗ್ರಾ.ಪಂ. ಸಭಾಂಗಣದಲ್ಲಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ನೋಡೆಲ್ ಅಧಿಕಾರಿಯಾಗಿ ಕಡಬ ತಾ.ಪಂ. ಸಹಾಯಕ ನಿರ್ದೇಶಕರಾದ ಚೆನ್ನಪ್ಪ ಗೌಡ ಕಜೆಮೂಲೆ ಆಗಮಿಸಿ ಕಾರ್ಯಕ್ರಮವನ್ನು ವೀಕ್ಷಿಸಿದರು.

ಎಡಮಂಗಲ ಗ್ರಾ.ಪಂ. ಪ್ರಭಾರ ಪಿಡಿಒ ಗೋಪಿನಾಥ್, ಅಧ್ಯಕ್ಷ ರಾಮಣ್ಣ ಜಾಲ್ತಾರು, ಉಪಾಧ್ಯಕ್ಷೆ ಶ್ರೀಮತಿ ದಿವ್ಯ ಯೋಗಾನಂದ, ನಿಕಟಪೂರ್ವ ಅಧ್ಯಕ್ಷೆ ಶ್ರೀಮತಿ ಗೀತಾ ಪ್ರವೀಣ್ ರೈ ಬಲ್ಕಾಡಿ, ಸದಸ್ಯರಾದ ನಾಗೇಶ ಮರೋಳಿ, ಮಾಯಿಲಪ್ಪ ಗೌಡ,

ಶ್ರೀಮತಿ ರೇವತಿ ಎಣ್ಮೂರು, ಶ್ರೀಮತಿ ಸವಿತಾ ಎಣ್ಮೂರು, ಶ್ರೀಮತಿ ಸುಮಾ ನೂಚಿಲ, ಶ್ರೀಮತಿ ವನಿತಾ ಕಾಯತ್ತಿಮಾರು, ದುಶ್ಯಂತ್ ದೋಣಿಮನೆ, ನವೀನ್ ಕಂರ್ಬಿಲ, ಶ್ರೀಮತಿ ರೇವತಿ ಎಂಜೀರು ಸೇರಿದಂತೆ ಪಂಚಾಯತ್ ಸಿಬ್ಬಂದಿ ವರ್ಗ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಮಹಿಳಾ ಫಲಾನುಭವಿಗಳು ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.