ಗುತ್ತಿಗಾರು: ರಾಜ್ಯ ಸರಕಾರದ ಗೃಹಲಕ್ಷ್ಮಿ ಯೋಜನೆಯ ಅನುಷ್ಠಾನ ಕಾರ್ಯಕ್ರಮ

0

300 ಕ್ಕೂ ಅಧಿಕ ಫಲಾನುಭಾವಿಗಳು ಭಾಗಿ

ಕರ್ನಾಟಕ ಸರಕಾರದ ಮಹಾತ್ವಕಾಂಕ್ಷಿ ಯೋಜನೆಯಾದ ಗೃಹಲಕ್ಷ್ಮಿ ಅನುಷ್ಠಾನ ಕಾರ್ಯಕ್ರಮ ಇಂದು ರಾಜ್ಯದಾದ್ಯಂತ ಅನುಷ್ಠಾನಗೊಳ್ಳಲಿರುವ ಹಿನ್ನೆಲೆಯಲ್ಲಿ ಗುತ್ತಿಗಾರು ಗ್ರಾ.ಪಂ. ಸಭಾಂಗಣದಲ್ಲಿ ಕಾರ್ಯಕ್ರಮವನ್ನು ಪ್ರೋಜೆಕ್ಟರ್ ಮುಖಾಂತರ ನೋಡುವ ವ್ಯವಸ್ಥೆ ಮಾಡಲಾಗಿತ್ತು.

ಗ್ರಾ.ಪಂ ಅಧ್ಯಕ್ಷೆ ಸುಮಿತ್ರಾ ಮೂಕಮಲೆ, ಉಪಾಧ್ಯಕ್ಷೆ ಭಾರತಿ ಸಾಲ್ತಾಡಿ, ಪಿಡಿಒ ಧನಪತಿ, ಗ್ರಾ.ಪಂ ಸದಸ್ಯರು ಉಪಸ್ಥಿತರಿದ್ದರು. ನೂರಾರು ಮಂದಿ ಫಲಾನುಭವಿಗಳು ಉಪಸ್ಥಿತರಿದ್ದರು. ಸಭಾಂಗಣ ಭರ್ತಿಗೊಂಡು ಹೊರಭಾಗದಲ್ಲೂ ಹಲವಾರು ಮಂದಿ ಮಹಿಳೆಯರು ಉಪಸ್ಥಿತರಿದ್ದರು