ಫುಟ್ಬಾಲ್‌ ಪಂದ್ಯಾಟ : ಕೆ.ಪಿ.ಎಸ್. ಗಾಂಧಿನಗರ ಜಿಲ್ಲಾ ಮಟ್ಟಕ್ಕೆ ಆಯ್ಕೆ

0

ಕರ್ನಾಟಕ ಪಬ್ಲಿಕ್ ಸ್ಕೂಲ್ ಗಾಂಧಿನಗರ ಪ್ರಾಥಮಿಕ ವಿಭಾಗದ ಫುಟ್ಬಾಲ್ ತಂಡ ತಾಲೂಕು ಮಟ್ಟದ ಪುಟ್ಬಾಲ್ ಪಂದ್ಯಾಟದಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದೆ.

ತಾಲೂಕು ಮಟ್ಟದ ಫುಟ್ಬಾಲ್ ಪಂದ್ಯಾಟವು ಗಾಂಧಿನಗರ ಶಾಲಾ ಮೈದಾನದಲ್ಲಿ ನಡೆಯಿತು.

ಫೈನಲ್ ಪಂದ್ಯಾಟದಲ್ಲಿ ಗಾಂಧಿನಗರ ಕೆ.ಪಿ.ಎಸ್. ತಂಡವು ಅಜ್ಜಾವಾರ ಪ್ರಾಥಮಿಕ ಶಾಲೆಯನ್ನು ಮಣಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಯಿತು.

ಉದ್ಘಾಟನೆ : ಉದ್ಘಾಟನಾ ಸಮಾರಂಭದ ಸಭಾಧ್ಯಕ್ಷತೆಯನ್ನು ಗಾಂಧಿನಗರ ಕೆಪಿಎಸ್ ನ ಕಾರ್ಯಧ್ಯಕ್ಷ ಚಿದಾನಂದ ಕುದ್ಪಾಜೆ ವಹಿಸಿದ್ದರು. ಉದ್ಘಾಟನೆಯನ್ನು ಶಿಕ್ಷಣ ಸಂಯೋಜಿಕಿ ಶ್ರೀಮತಿ ನಳಿನಿ ನೆರವೇರಿಸಿದರು. ಮುಖ್ಯ ಅತಿಥಿಗಳಾಗಿ ಗಾಂಧಿನಗರ ಕೆಪಿಎಸ್ಸಿನ ಪ್ರಾಂಶುಪಾಲರು ಅಬ್ದುಲ್ ಸಮದ್, ಸಮೂಹ ಸಂಪನ್ಮೂಲ ವ್ಯಕ್ತಿ ಮಮತಾ, ಉಪ ಪ್ರಾಂಶುಪಾಲರಾದ ಜ್ಯೋತಿ ಲಕ್ಷ್ಮಿ, ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷರಾದ ಧನಂಜಯ ಮೆರ್ಕಜೆ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಜೆ.ಕೆ ರೈ, ಮೊಯ್ದಿನ್ ಮಾಸ್ಟರ್ ಉಪಸ್ಥಿತಿಯರಿದ್ದರು. ಶಾಲಾ ಮುಖ ಶಿಕ್ಷಕರಾದ ಪದ್ಮನಾಭ ಅತ್ಯಾಡಿ ಸ್ವಾಗತಿಸಿದರು.

ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ರಮೇಶ್ ಬಿ ಇ. ಆಗಮಿಸಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಪ್ರಶಸ್ತಿ ಪಡೆದ ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರ ವಿತರಿಸಿ ಫುಟ್ಬಾಲ್ ಪಂದ್ಯಾಟಕ್ಕೆ ಶುಭ ಹಾರೈಸಿದರು. ಸಂಜೆ ನಡೆದ ಸಮಾರೋಪ ಸಮಾರಂಭದಲ್ಲಿ ಚಿದಾನಂದ ಕುದ್ಪಾಜೆ, ನಗರ ಪಂಚಾಯತ್ ಸದಸ್ಯರಾದ ಶರೀಫ್ ಕಂಠಿ, ಹಾಗೂ ದೈಹಿಕ ಶಿಕ್ಷಣ ಪರಿವೀಕ್ಷಕರಾದ ಸೂಫಿ ಪೆರಾಜೆ, ಕೆಪಿಎಸ್ ನ ಅಬ್ದುಲ್ ಅಜೀಜ್, ಜೈ ಭಾರತ್ ನಾ ಅಬ್ದುಲ್ ಮಜೀದ್ ವಿಜೇತ ಕ್ರೀಡಾಪಟುಗಳಿಗೆ ಬಹುಮಾನ ವಿತರಿಸಿದರು