ಸೆ.6: ಸೋಣಂಗೇರಿ ಶ್ರೀಕೃಷ್ಣ ಭಜನಾ ಮಂದಿರದ ವತಿಯಿಂದ ಶ್ರೀಕೃಷ್ಣ ಜನ್ಮಾಷ್ಠಮಿ

0

ಜಾಲ್ಸೂರು ಗ್ರಾಮದ ಸೋಣಂಗೇರಿ ಶ್ರೀಕೃಷ್ಣ ಭಜನಾ ಮಂದಿರದ ವತಿಯಿಂದ ಶ್ರೀಕೃಷ್ಣ ಜನ್ಮಾಷ್ಠಮಿ ಕಾರ್ಯಕ್ರಮವು ಸೆ.6ರಂದು ಜರುಗಲಿದೆ.

ಕಾರ್ಯಕ್ರಮವನ್ನು ನಿವೃತ್ತ ಪ್ರಾಂಶುಪಾಲ ಗೌರಿಶಂಕರ್ ಹೊಸಗದ್ದೆ ಉದ್ಘಾಟಿಸಲಿದ್ದಾರೆ‌. ಮುಖ್ಯ ಅತಿಥಿಗಳಾಗಿ ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಕುಸುಮಾವತಿ, ಗ್ರಾ.ಪಂ. ಸದಸ್ಯರುಗಳಾದ ಶಿವಪ್ರಸಾದ್ ಕುಕ್ಕಂದೂರು, ಶ್ರೀಮತಿ ದೀಪಾ ಅಜಕಳಮೂಲೆ ಉಪಸ್ಥಿತರಿರಲಿದ್ದಾರೆ.
ಈ ಸಂದರ್ಭದಲ್ಲಿ ಮಕ್ಕಳಿಗೆ ಜಾರುಗಂಬ ಸ್ಪರ್ಧೆ, ಪುರುಷರಿಗೆ ಲಕ್ಕಿಗೇಮ್, ಮೊಸರು ಕುಡಿಕೆ , ತೆಂಗಿನಕಾಯಿಗೆ ಕಲ್ಲು ಹೊಡೆಯುವುದು, ತೆಂಗಿನಕಾಯಿ ಕುಟ್ಟುವುದು, ಹಗ್ಗಜಗ್ಗಾಟ, ಮಹಿಳೆಯರಿಗೆ ಹಣತೆ ಹಚ್ಚುವುದು , ಮೊಸರು ಕುಡಿಕೆ, ಲಕ್ಕಿಗೇಮ್, ಹಗ್ಗಜಗ್ಗಾಟ ಜರುಗಲಿದೆ. ಮಧ್ಯಾಹ್ನ ಭೋಜನದ ಬಳಿಕ ಸಾಂಸ್ಕೃತಿಕ ಸ್ಪರ್ಧಾ ಕಾರ್ಯಕ್ರಮ ಜರುಗಲಿದೆ.
ಸಂಜೆ ನಡೆಯುವ ಸಮಾರೋಪ ಸಮಾರಂಭದಲ್ಲಿ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ ನಡೆಯಲಿದ್ದು, ಅಷ್ಟಮಿ ಪ್ರಯುಕ್ತ ಶ್ರೀಕೃಷ್ಣ ಭಜನಾ ಮಂದಿರದಲ್ಲಿ ರಾತ್ರಿ ವಿಶೇಷ ಭಜನೆ ನಡೆಯಲಿದೆ.