ಗುರುವಂದನಾ ಕಾರ್ಯಕ್ರಮ

0

ಸ್ನೇಹಿತರ ಕಲಾ ಸಂಘ ಬೆಳ್ಳಾರೆ ಇದರ ಆಶ್ರಯದಲ್ಲಿ ಶಿಕ್ಷಕರ ದಿನಾಚರಣೆಯ ಅಂಗವಾಗಿ ಗುರುವಂದನ ಕಾರ್ಯಕ್ರಮವು ನಿವೃತ್ತ ಶಿಕ್ಷಕ ದಂಪತಿಗಳಾದ ಐವರ್ನಾಡು ಶ್ರೀ ಉಮೇಶ್ ಗೌಡ ಮತ್ತು ಶ್ರೀಮತಿ ಜಯಂತಿ ಇವರನ್ನು ಗುರುವಂದನಾ ಪತ್ರದೊಂದಿಗೆ ಸನ್ಮಾನಿಸಿ, ಗೌರವಾರ್ಪಣೆಯನ್ನು ಸಮರ್ಪಿಸಿ, ಸಂಘದ ಸದಸ್ಯರು ಗುರುಗಳ ಆಶೀರ್ವಾದವನ್ನು ಪಡೆದರು.

ಸ್ನೇಹಿತರ ಕಲಾಸಂಘದ ಅಧ್ಯಕ್ಷ ವಸಂತ ಉಲ್ಲಾಸ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಪೂರ್ವಾಧ್ಯಕ್ಷ ಕೊರಗಪ್ಪ ಕುರುಂಬುಡೇಲು ಗುರುವಂದನಾ ಪತ್ರವನ್ನು ವಾಚಿಸಿದರು .ಪೂರ್ವ ಅಧ್ಯಕ್ಷ ಚಂದ್ರಶೇಖರ ಪನ್ನೆ ಸ್ವಾಗತಿಸಿ ,ಕಾರ್ಯದರ್ಶಿ ಆನಂದ ಉಮಿಕಳ ವಂದಿಸಿ, ನಿಕಟ ಪೂರ್ವ ಅಧ್ಯಕ್ಷ ಸಂಜಯ್ ನೆಟ್ಟಾರು ಕಾರ್ಯಕ್ರಮ ನಿರೂಪಿಸಿದರು.