ಬಿಳಿಯಾರು 24ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮ

0

ಅರಂತೋಡು ಗ್ರಾಮದ ಬಿಳಿಯಾರು ಸಾರ್ವಜನಿಕ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣ ಸಮಿತಿ ವತಿಯಿಂದ ಬಿಳಿಯಾರು ಶಾಲಾ ಮೈದಾನ ದಲ್ಲಿ ಇಂದು ನಡೆಯಿತು.ಕಾರ್ಯಕ್ರಮದ ಅಧ್ಯಕ್ಷತೆ ಯನ್ನು ಮಂಜುನಾಥ ಬಿಳಿಯಾರು ವಹಿಸಿದರು.

ಕಾರ್ಯಕ್ರಮ ವನ್ನು ಸುಳ್ಯ ವರ್ತಕರ ಸಂಘದ ಅಧ್ಯಕ್ಷ ರಾದ ಪಿ.ಬಿ.ಸುಧಾಕರ ರೈ ದೀಪ ಬೆಳಗಿಸಿ ಉದ್ಘಾಟನೆ ನೆರವೇರಿಸಿದರು.ವೇದಿಕೆಯಲ್ಲಿ ನಿವೃತ ಪ್ರಾಂಶುಪಾಲ ಕೆ.ಆರ್.ಗಂಗಾಧರ್,ನಿವೃತ ಪೋಲಿಸ್ ಪದ್ಮಯ್ಯ ಪೂಜಾರಿಮನೆ,ಜನಪ್ರಕಾಶ್,ಸುಳ್ಯ ತಾಲ್ಲೂಕು ವಿಶ್ವ ಹಿಂದೂ ಪರಿಷತ್ ಅಧ್ಯಕ್ಷ ಸೋಮಶೇಖರ್ ಪೈಕ,ಮಹೇಶ್,ಸೇರಿದಂತೆ ಮುಂತಾದವರು ಉಪಸ್ಥಿತಿದ್ದರು.ಕೆ.ಪಿ.ಕುಸುಮಾದರ ಸ್ವಾಗತಿಸಿ,ಆನಂದ ಬಿಳಿಯಾರು ಕಾರ್ಯಕ್ರಮ ನಿರೂಪಿಸಿದರು.