ಸೆ.17 : ಕುಲಾಲ ಸುಧಾರಕ ಸೇವಾ ಸಂಘ ಸುಳ್ಯ ಬೆಳ್ಳಾರೆ ವಾರ್ಷಿಕ ಮಹಾಸಭೆ

0

ಕುಲಾಲ ಸುಧಾರಕ ಸೇವಾ ಸಂಘ ಸುಳ್ಯ ಬೆಳ್ಳಾರೆ ಸಂಘದ ವಾರ್ಷಿಕ ಮಹಾಸಭೆಯು ಸೆ.17 ರಂದು ಅಯ್ಯನಕಟ್ಟೆ ಪಂಡಿತ್ ದೀನ್ ದಯಾಳ್ ಸಮುದಾಯ ಭವನದಲ್ಲಿ ನಡೆಯಲಿದೆ.
ಕುಲಾಲ ಸುಧಾರಕ ಸೇವಾ ಸಂಘದ ಅಧ್ಯಕ್ಷ ಶೈಲೇಶ್ ನೆಟ್ಟಾರು ಅಧ್ಯಕ್ಷತೆ ವಹಿಸಲಿದ್ದಾರೆ.
ಮುಡಿಪು ಕುಲಾಲ ಸಂಘದ ಅಧ್ಯಕ್ಷ ಯು.ಪುಂಡರೀಕಾಕ್ಷ ಮೂಲ್ಯ , ಉಡುಪಿ ವಿದ್ಯೋದಯ ಪದವಿಪೂರ್ವ ಕಾಲೇಜು ಗಣಿತಶಾಸ್ತ್ರ ಉಪನ್ಯಾಸಕಿ ಶ್ರೀಮತಿ ಸೌಮ್ಯ ಕಜೆಕಾರ್ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ಸಂಘದ ಸದಸ್ಯರು ,ಸ್ವಜಾತಿ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ತಮ್ಮ ಸಹಕಾರ ಸಲಹೆಗಳನ್ನಿತ್ತು ಮಹಾಸಭೆಯನ್ನು ಯಶಸ್ವಿಗೊಳಿಸಬೇಕಾಗಿ ಸಂಘದ ಕಾರ್ಯದರ್ಶಿ ಚಂದ್ರಶೇಖರ ಬಸ್ತಿಗುಡ್ಡೆ ತಿಳಿಸಿದ್ದಾರೆ.