ಪೆರಾಜೆ ಶ್ರೀ ಶಾಸ್ತಾವು ದೇವಸ್ಥಾನದಲ್ಲಿ ಶ್ರಾವಣ ಶನಿವಾರ ಪ್ರಯುಕ್ತ ಉಜ್ವಲ್ ಊರುಬೈಲು ಹಾಗೂ ಭಾರತ್ ಆಗ್ರೋ ರಾಮಚಂದ್ರ ಅವರಿಂದ ಫಲಹಾರ ವ್ಯವಸ್ಥೆ

0

ಪೆರಾಜೆ ಶ್ರೀ ಶಾಸ್ತಾವು ದೇವಸ್ಥಾನದಲ್ಲಿ ಶ್ರಾವಣ ಮಾಸದ ಶನಿವಾರದ ಪ್ರಯುಕ್ತ ಸೆ.2ರಂದು ಕೆವಿಜಿ ಇಂಜಿನಿಯರಿಂಗ್ ಕಾಲೇಜಿನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಉಜ್ವಲ್ ಊರುಬೈಲು ಮತ್ತು ಮನೆಯವರಿಂದ ಹಾಗೂ ಸೆ.9ರಂದು ಸುಳ್ಯದ ಭಾರತ್ ಆಗ್ರೋ ಸರ್ವೀಸಸ್ ಮಾಲಕ ರಾಮಚಂದ್ರ ಪಿ. ಮನೆಯವರಿಂದ ಭಕ್ತಾದಿಗಳಿಗೆ ಬೆಳಗ್ಗಿನ ಉಪಹಾರದ ವ್ಯವಸ್ಥೆ ಮಾಡಿದ್ದರು.


ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಪೆರಾಜೆ ಶ್ರೀ ಅಯ್ಯಪ್ಪ ದೀಪೋತ್ಸವ ಸಮಿತಿಯ ವತಿಯಿಂದ ಶ್ರೀ ವಾಲಿಮೋಕ್ಷ ಯಕ್ಷಗಾನ ತಾಳೆಮದ್ದಳೆ ನಡೆಯಿತು.

ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತ ಮಂಡಳಿಯ ಅಧ್ಯಕ್ಷರು ,ಪದಾಧಿಕಾರಿಗಳು ಸೇರಿದಂತೆ ಭಕ್ತಾದಿಗಳು ಉಪಸ್ಥಿತರಿದ್ದರು.