ಸೆ.16 ಸುಳ್ಯದಲ್ಲಿ ಕರ್ನಾಟಕ ರಾಜ್ಯ ವಿಶೇಷ ಶಿಕ್ಷಕರ ಹಾಗೂ ಶಿಕ್ಷಕೇತರರ ಸಂಘದ ಶಿಕ್ಷಕ ದಿನಾಚರಣೆ

0

ಕರ್ನಾಟಕ ರಾಜ್ಯ ವಿಶೇಷ ಶಿಕ್ಷಕರ ಹಾಗೂ ಶಿಕ್ಷಕೇತರರ ಸಂಘ ದ.ಕ ಜಿಲ್ಲಾ ಘಟಕ,ಎಂ ಬಿ ಫೌಂಡೇಶನ್ ಸುಳ್ಯ ಹಾಗೂ ಲಯನ್ಸ್ ಕ್ಲಬ್ ಇದರ ಆಶ್ರಯದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ವಿಶೇಷ ಶಾಲೆಗಳಲ್ಲಿ ಸೇವಾ ನಿರತರಾಗಿರುವ ವಿಶೇಷ ಶಿಕ್ಷಕರ ಶಿಕ್ಷಕರ ದಿನಾಚರಣೆ

ಸೆ.16 ಸುಳ್ಯ ಸಾಂದೀಪ್ ವಿಶೇಷ ಮಕ್ಕಳ ಶಾಲೆ ಬಳಿಯಿರುವ ಲಯನ್ಸ್ ಕ್ಲಬ್ ಸಭಾಂಗಣದಲ್ಲಿ ನಡೆಯಲಿದೆ.ಕಾರ್ಯಕ್ರಮವನ್ನು ಸುಳ್ಯದ ಶಾಸಕಿ ಭಾಗೀರಥಿ ಮುರುಳ್ಯ ಉದ್ಘಾಟಿಸಲಿದ್ದಾರೆ.ಕಾರ್ಯಕ್ರಮದಲ್ಲಿ ಡಾ.ಉಮ್ಮರ್ ಬೀಜದಕಟ್ಟೆ ಶಿಖರೋಪನ್ಯಾದ ಮಾಡಲಿದ್ದಾರೆ.

ಎಂ ಬಿ ಫೌಂಡೇಶನ್ ಅಧ್ಯಕ್ಷ ಎಂ ಬಿ ಸದಾಶಿವ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.ಸುಳ್ಯ ಕ್ಷೇತ್ರ ಶಿಕ್ಷಣಾಧಿಕಾರಿ ರಮೇಶ್ ಬಿ ಇ,ಲಯನ್ಸ್ ಕ್ಲಬ್ ಅಧ್ಯಕ್ಷ ಲ|ವೀರಪ್ಪ ಗೌಡ, ಶಿಕ್ಷಕರ ಸಂಘದ ರಾಜ್ಯ ಕಾರ್ಯದರ್ಶಿ ವಸಂತ ಕುಮಾರ್,

ಸಿಡಿಪಿಒ ಶ್ರೀಮತಿ ಶೈಲಜಾ ಮೊದಲಾದವರು ಬಾಗವಹಿಸಲಿದ್ದಾರೆ.ಸಭಾ ಕಾರ್ಯಕ್ರಮದ ನಂತರ ಶಿಕ್ಷಕರಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ ಎಂದು ಸಾಂದೀಪ್ ವಿಶೇಷ ಮಕ್ಕಳ ಶಾಲೆ ಸಂಚಾಲಕಿ ಹರಿಣಿ ಸದಾಶಿವ ತಿಳಿಸಿದ್ದಾರೆ.