ವಿನೋಬನಗರ : ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸಂಘ ಸಂಸ್ಥೆಗಳ ಆಶ್ರಯದಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರ

ಶಿಬಿರದ ಪ್ರಯೋಜನ ಪಡೆದ ನೂರಕ್ಕೂ ಹೆಚ್ಚು ಮಂದಿ

0

ಸುಳ್ಯ ಲಯನ್ಸ್ ಕ್ಲಬ್, ಸಂಧ್ಯಾ ಚೇತನ ಹಿರಿಯ ನಾಗರಿಕರ ಸಂಘ ಸುಳ್ಯ ಹಾಗೂ ಜಸ್ಟಿಸ್ ಕೆ.ಎಸ್.ಹೆಗ್ಡೆ ಆಸ್ಪತ್ರೆ ಮಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ಸೆ.10 ರಂದು ಶ್ರೀ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ ವಿನೋಬ ನಗರ ಅಡ್ಕಾರ್ ಇಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಜರಗಿತು.

ಸಮಾರಂಭದ ಅಧ್ಯಕ್ಷತೆಯನ್ನು ಲಯನ್ಸ್ ಕ್ಲಬ್ ಅಧ್ಯಕ್ಷರಾದ ವೀರಪ್ಪಗೌಡ ಕಣ್ಕಲ್ ವಹಿಸಿದ್ದರು. ಉದ್ಘಾಟನೆಯನ್ನು ವಿನೋಬನಗರ ಆಂಗ್ಲ ಮಾಧ್ಯಮ ಶಾಲೆ ಸಂಚಾಲಕರಾದ ಸುಧಾಕರ ಕಾಮತ್ ನೆರವೇರಿಸಿದರು. ಮುಖ್ಯ ಅತಿಥಿಗಳಾಗಿ ಕೆಎಸ್ ಹೆಗ್ಡೆ ಆಸ್ಪತ್ರೆಯ ಶಸ್ತ್ರಚಿಕಿತ್ಸಾ ವಿಭಾಗದ ಮುಖ್ಯಸ್ಥರಾದ ಪ್ರೊಫೆಸರ್ ಡಾ. ರಾಜೇಶ್ವರ್ ಶುಭ ಹಾರೈಸಿದರು ಬೆಳ್ಳಾರೆ ಹೆಲ್ತ್ ಸೆಂಟರ್ ನ ವೈದಾಧಿಕಾರಿಗಳಾದ ಡಾ.ಗಿರೀಶ್,

ಕ್ಯಾಂಪ್ ಇನ್ ಚಾರ್ಜ್ ಗಿರಿಧರ ಗೌಡ, ಕ್ಯಾಂಪ್ ಕಾರ್ಡಿನೇಟರ್ ಡಾ. ರಂಗಯ್ಯ, ಸಂಧ್ಯಾ ಚೇತನ ಹಿರಿಯ ನಾಗರಿಕರ ಸಂಘದ ಕಾರ್ಯದರ್ಶಿ ಚೆನ್ನಕೇಶವ ಜಾಲ್ಸೂರು, ಲಯನ್ಸ್ ಕಾರ್ಯದರ್ಶಿ ದೊಡ್ಡಣ್ಣ ಬರೆಮೇಲು, ಕೋಶಾಧಿಕಾರಿ ಕಿರಣ್ ನೀರ್ಪಾಡಿ ಉಪಸ್ಥಿತರಿದ್ದರು.

ಸಂಧ್ಯಾ ಚೇತನ ಹಿರಿಯ ನಾಗರಿಕರ ಸಂಘದ ಕೋಶಾಧಿಕಾರಿ ರಾಮಚಂದ್ರ ಪೆಲ್ತಡ್ಕ ಮತ್ತು ಸದಸ್ಯರು ಹಾಗೂ ಸುಳ್ಯ ಲಯನ್ಸ್ ಕ್ಲಬ್ ನ ಹೆಚ್ಚಿನ ಸದಸ್ಯರು ಭಾಗವಹಿಸಿದ್ದರು. ಸುಮಾರು ನೂರಕ್ಕಿಂತಲೂ ಹೆಚ್ಚುಜನ ಆರೋಗ್ಯ ತಪಾಸಣಾ ಶಿಬಿರದ ಪ್ರಯೋಜನ ಪಡೆದುಕೊಂಡರು.