ಸೆ.15 ರಂದು ಸುಬ್ರಹ್ಮಣ್ಯದ ಕೆ.ಎಸ್ .ಎಸ್ ಕಾಲೇಜಿನಲ್ಲಿ ಬೃಹತ್ ರಕ್ತದಾನ ಶಿಬಿರ : ಸುಬ್ರಹ್ಮಣ್ಯ ಲಯನ್ಸ್ ಕ್ಲಬ್

0

ಲಯನ್ಸ್ ಕ್ಲಬ್ ಕುಕ್ಕೆ ಸುಬ್ರಹ್ಮಣ್ಯ, ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯ ಸುಬ್ರಹ್ಮಣ್ಯ ಆಂತರಿಕ ಗುಣಮಟ್ಟ ಭರವಸಾ ಕೋಶ ಇದರ ಆಶ್ರಯದಲ್ಲಿ ವಿವಿಧ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಎ.ಜೆ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರ ಬ್ಲಡ್ ಬ್ಯಾಂಕ್ ಮಂಗಳೂರು ಬೃಹತ್ ರಕ್ತದಾನ ಶಿಬಿರ ಸೆ. 15 ರಂದು ಕೆ.ಎಸ್ .ಎಸ್ ಕಾಲೇಜಿನಲ್ಲಿ ನಡೆಯಲಿದೆ ಕುಕ್ಕೆ ಸುಬ್ರಹ್ಮಣ್ಯದ ಲಯನ್ಸ್ ಕ್ಲಬ್ ಅಧ್ಯಕ್ಷ ರಾಮಚಂದ್ರ ಪಳಂಗಾಯ ಹೇಳಿದ್ದಾರೆ.
ಸುಬ್ರಹ್ಮಣ್ಯದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಅವರು ಈ ವಿಷಯ ತಿಳಿಸಿದರು.


ಸಮಾರಂಭವನ್ನು ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಕಾರ್ಯನಿರ್ವಾಹಣಾಧಿಕಾರಿ ಡಾ. ನಿಂಗಯ್ಯ ಉದ್ಘಾಟಿಸಲಿದ್ದಾರೆ. ಕನಿಷ್ಠ ೧೦೦ ಯೂನಿಟ್ ರಕ್ತ ಸಂಗ್ರಹಿಸುವ ಗುರಿ ಹೊಂದಲಾಗಿದೆ. ಇದು ನಮ್ಮ ಸುಬ್ರಹ್ಮಣ್ಯ ಲಯನ್ಸ್ ಕ್ಲಬ್ ವತಿಯಿಂದ ನಡೆಯುವ ಮೂರನೇ ರಕ್ತದಾನ ಶಿಬಿರವಾಗಿದೆ ಎಂದು ಅವರು ಹೇಳಿದರು.
ಕೆ.ಎಸ್.ಎಸ್ ಕಾಲೇಜಿನ ಪ್ರಭಾರ ಪ್ರಾಂಶುಪಾಲರಾದ ದಿನೇಶ್ ಕೆ, ಲಯನ್ಸ್ ಕ್ಲಬ್ ನ ನಿಕಟಪೂರ್ವ ಆಧ್ಯಕ್ಷ ಕೆ.ಆರ್ ಶೆಟ್ಟಿಗಾರ್, ಲಯನ್ಸ್ ಕ್ಲಬ್ ಸುಬ್ರಹ್ಮಣ್ಯದ ಕಾರ್ಯದರ್ಶಿ ಸತೀಶ್ ಕೂಜುಗೋಡು, ಕೋಶಾಧಿಕಾರಿ ಚಂದ್ರಶೇಖರ ಪಾನತ್ತಿಲ ಉಪಸ್ಥಿತರಿದ್ದರು.