ಪೆರುವಾಜೆ : ಮಾತೃಶ್ರೀ ಜ್ಞಾನವಿಕಾಸ ಕೇಂದ್ರದ ಸದಸ್ಯರಿಗೆ ಸಿರಿಧಾನ್ಯ ಬಳಕೆ ಮಾಹಿತಿ ಕಾರ್ಯಕ್ರಮ

0

ಬೆಳ್ಳಾರೆ ವಲಯ ಪೆರುವಾಜೆ ಗ್ರಾಮದ ಮಾತೃಶ್ರೀ ಜ್ಞಾನವಿಕಾಸ ಕೇಂದ್ರದ ಸದಸ್ಯರಿಗೆ ಸಿರಿಧಾನ್ಯ ಬಳಕೆ ಮಾಹಿತಿ ಕಾರ್ಯಕ್ರಮವು ನಡೆಸಲಾಯಿತು. ಈ ಸಂದರ್ಭದಲ್ಲಿ ಪೆರುವಾಜೆ ಶ್ರೀ ಜಲದುರ್ಗ ದೇವಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಪದ್ಮನಾಭ ಶೆಟ್ಟಿ ಕಾರ್ಯಕ್ರಮವನ್ನು ಉದ್ಘಾಟಿಸಿದರು.

ನಿವೃತ್ತ ಪೊಲೀಸ್ ಅಧಿಕಾರಿ ಲಯನ್ಸ್ ಕ್ಲಬ್ ಅಧ್ಯಕ್ಷ ವಿಠಲ ಶೆಟ್ಟಿ, ಪೆರುವಾಜೆ ಸಹಕಾರಿ ಹಿರಿಯ ಪ್ರಾಥಮಿಕ ಶಾಲೆ ಮುಖ್ಯೋಪಾಧ್ಯಾಯರು ಪ್ರಜ್ವಲ್, ತಾಲೂಕು ಸಮನ್ವಯ ಅಧಿಕಾರಿಯದ ಶ್ರೀಮತಿ ಭಾರತಿ, ವಲಯ ಮೇಲ್ವಿಚಾರಕರಾದ ಗೋಪಾಲಕೃಷ್ಣ , ಗ್ರಾಮದ ಸೇವಾ ಪ್ರತಿನಿಧಿಯಾದ ಶ್ರೀಮತಿ ಹರಿಣಾಕ್ಷಿ ಉಪಸ್ಥಿತರಿದ್ದರು.