ಕೊಡಿಯಾಲದಲ್ಲಿ ರಾಷ್ಟ್ರೀಯ ಪೌಷ್ಟಿಕ ಆಹಾರ ಸಪ್ತಾಹ, ಪೋಷಣ್ ಅಭಿಯಾನ

0

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಸಮಗ್ರ ಶಿಶು ಅಭಿವೃದ್ದಿ ಯೋಜನೆ ಸುಳ್ಯ, ಶ್ರೀ ದೇವೀ ಗೊಂಚಲು ಸಮಿತಿ ಬಾಚೋಡಿ ಕೊಡಿಯಾಲ ಇದರ ಆಶ್ರಯದಲ್ಲಿ ರಾಷ್ಟ್ರೀಯ ಪೌಷ್ಟಿಕ ಆಹಾರ ಸಪ್ತಾಹ, ಪೋಷಣ್ ಅಭಿಯಾನ ಮಾಸಾಚರಣೆ ಕಾರ್ಯಕ್ರಮ ಸೆ.14 ರಂದು ಬಾಚೋಡಿ ಸ.ಕಿ.ಪ್ರಾ. ಶಾಲೆಯಲ್ಲಿ ನಡೆಯಿತು. ಕೊಡಿಯಾಲ ಗ್ರಾ.ಪಂ. ಅಧ್ಯಕ್ಷ ಹರಿಶ್ಚಂದ್ರ ಟಿ. ಕಾರ್ಯಕ್ರಮವನ್ನು ಉದ್ಘಾಟಿಸಿ ಶುಭ ಹಾರೈಸಿದರು. ವೇದಿಕೆಯಲ್ಲಿ ಪಿಡಿಒ ಜಯಂತ್, ಉಪಾಧ್ಯಕ್ಷೆ ಚಿತ್ರ, ಸುಳ್ಯ ಬ್ಲಾಕ್ ಸೊಸೈಟಿ ಸದಸ್ಯೆ ಶ್ರೀಮತಿ ಹರಿಣಾಕ್ಷಿ, ಗೊಂಚಲಿನ ಅಧ್ಯಕ್ಷೆ ಸರೋಜಾ, ಸುರಕ್ಷಾ ಅಧಿಕಾರಿ ಶ್ರೀಮತಿ ರೇಷ್ಮಾ, ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಪಾರ್ವತಿ, ಅಂಗನವಾಡಿ ಕಾರ್ಯಕರ್ತೆ ಶ್ರೀಮತಿ ಪ್ರೇಮ‌ ಬಿ. ರೈ, ಶ್ರೀಮತಿ ಸುಂದರಿ ಉಪಸ್ಥಿತರಿದ್ದು ಶುಭ ಹಾರೈಸಿದರು. ಸಮಗ್ರ ಶಿಶು ಅಭಿವೃದ್ಧಿ ಯೋಜನೆ, ಬೆಳ್ಳಾರೆ ವಲಯದ ಮೇಲ್ವಿಚಾರಕಿ ಶ್ರೀಮತಿ ಉಷಾ ಪ್ರಸಾದ್ ರೈ ಕಾರ್ಯಕ್ರಮದ ಬಗ್ಗೆ ಪೌಷ್ಟಿಕತೆಯ ಬಗ್ಗೆ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಶ್ರೀಮತಿ ರಮ್ಯ ಮತ್ತು ಶ್ರೀಮತಿ ರೇಖಾ ಪ್ರಾರ್ಥಸಿದರು. ಶ್ರೀಮತಿ ವಸಂತಿ ಪೈ ಕಾರ್ಯಕ್ರಮ ನಿರೂಪಿಸಿದರು. ಶ್ರೀಮತಿ ವಸಂತಿ ಸ್ವಾಗತಿಸಿ ಶ್ರೀಮತಿ ಸುಂದರಿ ವಂದಿಸಿದರು.