ಸುಳ್ಯ ಯುವಜನ ಸೇವಾ ಸಂಸ್ಥೆ ಮಹಾಸಭೆ

0

ಅಧ್ಯಕ್ಷ ದೀಪಕ್ ಕುತ್ತಮೊಟ್ಟೆ, ಕಾರ್ಯದರ್ಶಿ ದಯಾನಂದ ಕೇರ್ಪಳ

ಸುಳ್ಯ ಯುವಜನ ಸೇವಾ ಸಂಸ್ಥೆ ಇದರ 22-23ನೇ ಸಾಲಿನ ವಾರ್ಷಿಕ ಮಹಾಸಭೆಯು ಸೆ.15ರಂದು ಯುವಜನ ಸಂಯುಕ್ತ ಮಂಡಳಿಯ ಸಭಾಭವನದಲ್ಲಿ ನಡೆಯಿತು.

ಸೇವಾ ಸಂಸ್ಥೆ ಅಧ್ಯಕ್ಷ ದೀಪಕ್ ಕುತ್ತಮೊಟ್ಟೆ ಅಧ್ಯಕ್ಷತೆಯನ್ನು ವಹಿಸಿಕೊಂಡಿದ್ದರು. ಅನಿಲ್ ಪೂಜಾರಿಮನೆ ವಾರ್ಷಿಕ ವರದಿ ಹಾಗೂ ಆಯವ್ಯಯ ಮಂಡಿಸಿದರು,
ನಂತರ ನೂತನ ಪದಾಧಿಕಾರಿಗಳ ಆಯ್ಕೆ ನಡೆಯಿತು.


ನೂತನ ಅಧ್ಯಕ್ಷರಾಗಿ ದೀಪಕ್ ಕುತ್ತಮೊಟ್ಟೆ, ಗೌರವ ಕಾರ್ಯದರ್ಶಿಯಾಗಿ ದಯಾನಂದ ಕೇರ್ಪಳ,ಹಾಗೂ ಗೌರವ ಕೋಶಾಧಿಕಾರಿಯಾಗಿ ಅನಿಲ್ ಪೂಜಾರಿಮನೆ ಆಯ್ಕೆಯಾದರು.


ಈ ಸಂದರ್ಭದಲ್ಲಿ ಕಟ್ಟಡದ ನಿರ್ವಹಣೆ ಮಾಡುತ್ತಿರುವ ವಿಜಯಕುಮಾರ್ ಉಬರಡ್ಕರವರನ್ನು ಗೌರವಿಸಲಾಯಿತು. ಯುವಜನ ಸಂಯುಕ್ತ ಮಂಡಳಿಯ ಪೂರ್ವಾಧ್ಯಕ್ಷರು ಹಾಗೂ ಯುವಜನ ಸೇವಾ ಸಂಸ್ಥೆಯ ನಿರ್ದೇಶಕರುಗಳು ಉಪಸ್ಥಿತರಿದ್ದರು.