ವಿಶ್ವಬ್ರಾಹ್ಮಣ ಸಮಾಜಸೇವಾ ಸಂಘದ ಆಶ್ರಯದಲ್ಲಿ ವಿಶ್ವಕರ್ಮ ಜಯಂತಿ ಆಚರಣೆ

0

ಸುಳ್ಯದ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ, ಸುಳ್ಯ ತಾಲೂಕು ವಿಶ್ವಬ್ರಾಹ್ಮಣ ಸಮಾಜಸೇವಾ ಸಂಘದ ಆಶ್ರಯದಲ್ಲಿ ವಿಶ್ವಕರ್ಮ ಜಯಂತಿ ಆಚರಣೆಯು ಸೆ.17ರಂದು ಸುಳ್ಯದ ತಾಲೂಕು ಕಛೇರಿ ಸಭಾಂಗಣದಲ್ಲಿ ನಡೆಯಿತು.

ಶಾಸಕಿ ಭಾಗೀರಥಿ ಮುರುಳ್ಯ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ, ಶುಭಹಾರೈಸಿದರು. ವಿಶ್ವೇಶ್ವರ ಪುರೋಹಿತ ಬಾಳಿಲ ಅವರು ಧಾರ್ಮಿಕ ಉಪನ್ಯಾಸ ನೀಡಿದರು.
ಈ ಸಂದರ್ಭದಲ್ಲಿ ಕಮ್ಮಾರ ಸಂಘದ ಅಧ್ಯಕ್ಷ ಸತೀಶ ಆಚಾರ್ಯ ಚೊಕ್ಕಾಡಿ, ತಾಲೂಕು ಅಧ್ಯಕ್ಷ ವಾಸುದೇವ ಆಚಾರ್ಯ, ಶಿಕ್ಷಕ ಪುರುಷೋತ್ತಮ ಆಚಾರ್ಯ ಅಜ್ಜಾವರ ಅವರನ್ನು ಗೌರವಿಸಿ, ಸನ್ಮಾನಿಸಲಾಯಿತು.
ಶಿಕ್ಷಣ ಸಂಯೋಜಕಿ ಶ್ರೀಮತಿ ನಳಿನಿ, ವಾಸ್ತುಶಿಲ್ಪಿ ಪದ್ಮನಾಭ ಆಚಾರ್ಯ ಕಡೆಪಾಲ, ಪದ್ಮನಾಭ ಸ್ವಾಮಿ ಮೇನಾಲ, ದೇವಪ್ಪ ಆಚಾರ್ಯ ಕಲ್ಚಾರ್, ಜನಾರ್ದನ ಆಚಾರ್ಯ ಕುಂಟಿಕಾನ, ಸೇರಿದಂತೆ ವಿಶ್ವಕರ್ಮ ಸಂಘದ ಪದಾಧಿಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಮಹಿಳಾ ಸಂಘದ ಅಧ್ಯಕ್ಷೆ ಶ್ರೀಮತಿ ರೇಖಾ ದೇವಪ್ಪ ಆಚಾರ್ಯ ಕಾರ್ಯಕ್ರಮ ನಿರೂಪಿಸಿದರು. ಕು. ಅಕ್ಷತಾ ಪ್ರಾರ್ಥಿಸಿ, ವಂದಿಸಿದರು.