ಗುತ್ತಿಗಾರು ಪ್ರೌಢಶಾಲೆಯಲ್ಲಿ ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮ

0

ಸುಳ್ಯ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ , ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಬೆಳ್ತಂಗಡಿ ಇದರ ಆಶ್ರಯದಲ್ಲಿ ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮವು
ಗುತ್ತಿಗಾರು ಸರಕಾರಿ ಪ್ರೌಢಶಾಲೆಯಲ್ಲಿ ಸೆ.22 ರಂದು ನಡೆಯಿತು.

ಮುಖ್ಯ ಶಿಕ್ಷಕ ನೆಲ್ಸನ್ ಕ್ಯಾಸ್ಟಿಲಿನೋ ಅಧ್ಯಕ್ಷತೆ ವಹಿಸಿದ್ದರು.
ಗುತ್ತಿಗಾರು ಜನಜಾಗೃತಿ ವೇದಿಕೆಯ ವಲಯ ಅಧ್ಯಕ್ಷ ಮಿತ್ರದೇವ ಮಡಪ್ಪಾಡಿ ದೀಪ ಪ್ರಜ್ವಲಿಸಿದರು‌.
ಸಂಪನ್ಮೂಲ ವ್ಯಕ್ತಿ ಸೋಮಶೇಖರ ನೇರಲ ರವರು ಮಾತನಾಡಿ ದುಶ್ಚಟಗಳಿಂದಾಗುವ ದುಷ್ಪರಿಣಾಮಗಳ ಬಗ್ಗೆ ಮತ್ತು ಅತಿಯಾದ ಮೊಬೈಲ್ ಬಳಕೆಯು ಆರೋಗ್ಯಕ್ಕೆ ಹಾನಿಕರವಾಗುವುದು ಎಂದು ವಿದ್ಯಾರ್ಥಿಗಳಿಗೆ ಕಿವಿ ಮಾತು ಹೇಳಿದರು.
ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲೆ ಶ್ರೀಮತಿ ಚೆನ್ನಮ್ಮ, ವಲಯ ಮೇಲ್ವಿಚಾರಕ ಬಾಲಕೃಷ್ಣ ಗೌಡ ಕೆ, ಗುತ್ತಿಗಾರು ಸೇವಾಪ್ರತಿನಿಧಿ ಲೋಕೇಶ್ವರ್ ಡಿ ಆರ್, ಶಿಕ್ಷಕಿ ಚೈತ್ರಾ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಶಿಕ್ಷಕ ಪ್ರಸನ್ನಕಾರ್ಯಕ್ರಮ ನಿರೂಪಿಸಿದರು.