ಸುಳ್ಯ ಗಣೇಶೋತ್ಸವದಲ್ಲಿ ಲೋಕ ಕಲ್ಯಾಣಾರ್ಥ 108 ತೆಂಗಿನ ಕಾಯಿ ಗಣಪತಿ ಹವನ

0

ಸುಳ್ಯ ಶ್ರೀ ಸಿದ್ದಿವಿನಾಯಕ ಸೇವಾ ಸಮಿತಿ ಸಾರ್ವಜನಿಕ ಶ್ರೀ ದೇವತಾರಾಧನಾ ಸಮಿತಿ ಇದರ ಆಶ್ರಯದಲ್ಲಿ
55 ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ಪ್ರಯುಕ್ತ ಇಂದು ಬೆಳಗ್ಗೆ ಅರ್ಚಕರ ನೇತೃತ್ವದಲ್ಲಿ ವಿಶೇಷವಾಗಿ ಲೋಕ ಕಲ್ಯಾಣಾರ್ಥ 108 ತೆಂಗಿನ ಕಾಯಿ ಗಣಪತಿ ಹವನ ಚೆನ್ನಕೇಶವ ದೇವಳದ ಆವರಣದಲ್ಲಿ ನೆರವೇರಿತು.
ಈ ಸಂದರ್ಭದಲ್ಲಿ ಸಮಿತಿ ಪದಾಧಿಕಾರಿಗಳು ಹಾಗೂ ಸದಸ್ಯರು ಮತ್ತು ಭಕ್ತಾದಿಗಳು ಉಪಸ್ಥಿತರಿದ್ದರು. ಆಗಮಿಸಿದ ಎಲ್ಲಾ ಭಕ್ತಾದಿಗಳಿಗೆ ಪ್ರಸಾದ ವಿತರಣೆ ಹಾಗೂ ಸಾರ್ವಜನಿಕ ಅನ್ನ ಸಂತರ್ಪಣೆ ನಡೆಯಿತು.