ಸುಳ್ಯ ಮರಾಟಿ ಯುವ ವೇದಿಕೆಯ ಆಶ್ರಯದಲ್ಲಿ ತರಬೇತಿ ಕಾರ್ಯಕ್ರಮ ಸ್ಪೂರ್ತಿ, ಆಮಂತ್ರಣ ಪತ್ರ ಬಿಡುಗಡೆ

0

ಮರಾಟಿ ಸಮಾಜ ಸೇವಾ ಸಂಘ ಸುಳ್ಯ ಇದರ ಆಶ್ರಯದಲ್ಲಿರುವ ಮರಾಟಿ ಯುವ ವೇದಿಕೆಯಲ್ಲಿ ಮುಂದಾಳತ್ವದಲ್ಲಿ ಸಂಘಟನೆ ನಾಯಕತ್ವ ಹಾಗೂ ಪರಿಣಾಮಕಾರಿ ಬಾಷಣಕಲೆ ವಿಷಯವಾಗಿ ಎರಡು ದಿನಗಳ ತರಬೇತಿ ಕಾರ್ಯಕ್ರಮ ಸ್ಪೂರ್ತಿ ಸೆ. 1 ಮತ್ತು 2ರಂದು ಅಂಬಟೆಡ್ಕದಲ್ಲಿರುವ ಸಂಘದ ಸಭಾಭವನ ಗಿರಿದರ್ಶಿನಿಯಲ್ಲಿ ನಡೆಯಲಿದ್ದು, ಆಮಂತ್ರಣ ಪತ್ರ ಬಿಡುಗಡೆ ಕಾರ್ಯಕ್ರಮ ಸೆ. 24ರಂದು ಗಿರಿದರ್ಶಿನಿಯಲ್ಲಿ ನಡೆಯಿತು.


ಮರಾಟಿ ಸಮಾಜ ಸೇವಾ ಸಂಘದ ಅಧ್ಯಕ್ಷ ಜನಾರ್ಧನ ಬಿ. ಕುರುಂಜಿಭಾಗ್, ಪ್ರಧಾನ ಕಾರ್ಯದರ್ಶಿ ಬಾಲಕೃಷ್ಣ ನಾಯ್ಕ್ ಅಜ್ಜಾವರ, ಕೋಶಾಧಿಕಾರಿ ಜನಾರ್ಧನ ನಾಯ್ಕ್ ಕೇರ್ಪಳ, ಮಹಿಳಾ ವೇದಿಕೆಯ ಅಧ್ಯಕ್ಷೆ ಶ್ರೀಮತಿ ಗಿರಿಜಾ ಜನಾರ್ಧನ್ ಕೊಡಿಯಾಲಬೈಲು, ಕಾರ್ಯದರ್ಶಿ ಶ್ರೀಮತಿ ಕುಸುಮಾ ಜನಾರ್ಧನ್ ಯುವ ವೇದಿಕೆಯ ಅಧ್ಯಕ್ಷ ಮೋಹನ್ ಪೆರಾಜೆ, ಕಾರ್ಯದರ್ಶಿ ಉದಯಕುಮಾರ್ ಮಾಣಿಬೆಟ್ಟು ಸೇರಿದಂತೆ ಮರಾಟಿ ಸಮಾಜ ಸೇವಾ ಸಂಘದ ಕಾರ್ಯಕಾರಿ ಸಮಿತಿ ಸದಸ್ಯರು, ಮಹಿಳಾ ವೇದಿಕೆಯ ಸದಸ್ಯರು, ಯುವ ವೇದಿಕೆಯ ಸದಸ್ಯರು ಮತ್ತು ಸಮಾಜ ಬಾಂಧವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.