ಮುಡ್ನೂರು ಮರ್ಕಂಜ ಶಾಲೆಗೆ ತಾ.ಪಂ. ಕಾರ್ಯನಿರ್ವಹಣಾಧಿಕಾರಿ ರಾಜಣ್ಣ ಭೇಟಿ

0

ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮೂಡ್ನೂರು ಮರ್ಕಂಜ ಶಾಲೆಗೆ ಡಿಜಿಟಲ್ ಗ್ರಂಥಾಲಯ ಮಂಜೂರು ಗೊಳಿಸಲು ಮಾಜಿ ಸಚಿವ ಎಸ್ ಅಂಗಾರ ರವರು ಕಾರ್ಯನಿರ್ವಹಣಾಧಿಕಾರಿಗೆ ಸೂಚನಾ ಪತ್ರ ನೀಡಿದ್ದು ಈ ಬಗ್ಗೆ ಸುಳ್ಯ ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ರಾಜಣ್ಣ ರವರು ಭೇಟಿ ನೀಡಿ ಪರಿಶೀಲಿಸಿದರು. ಗ್ರಂಥಾಲಯಕ್ಕೆ ಅನುಮೋದನೆ ನೀಡುವುದಾಗಿ ತಿಳಿಸಿದರು. ಅಲ್ಲದೆ ಹೊಸದಾಗಿ ಶೌಚಾಲಯ ನಿರ್ಮಾಣಕ್ಕೆ ಅನುಮೋದನೆ ನೀಡಲು ಮರ್ಕಂಜ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗೆ ಸೂಚನೆ ನೀಡಿ ಕ್ರಿಯಾಯೋಜನೆ ಕಳುಹಿಸಿಕೊಡಲು ಸೂಚಿಸಿದ್ದಾರೆ.

ಅಭಿವೃದ್ಧಿ ನಿರ್ವಹಣಾ ಸಮಿತಿಯ ನೇತೃತ್ವದಲ್ಲಿ ನಿರ್ಮಾಣಗೊಳ್ಳುತ್ತಿರುವ ಭೋಜನ ಶಾಲೆಯ ಕಾಮಗಾರಿಯನ್ನು ಪರಿಶೀಲಿಸಿ ಅನುದಾನ ಒದಗಿಸುವ ಬಗ್ಗೆ ಭರವಸೆ ನೀಡಿದರು. ಸಂಚಾಲಕರಾದ ಜಿ. ಜಗನ್ನಾಥ ಜಯನಗರ, ಅಧ್ಯಕ್ಷರಾದ ಹೇಮ ಕುಮಾರ್ ಜೋಗಿ ಮೂಲೆ, ಉಪಾಧ್ಯಕ್ಷರಾದ ಶ್ರೀಮತಿ ಸಂಧ್ಯಾ ದೋಳ, ಸದಸ್ಯರಾದ ಶ್ರೀಮತಿ ಪ್ರಿಯಾ ಕಾಯಿಪಲ್ಲ, ಶ್ರೀಮತಿ ಮೀನಾಕ್ಷಿ ಬೊಮ್ಮಟ್ಟಿ, ಅನಿಲ್ ಅಂಬೆಕಲ್ಲು, ಕೋಶಾಧಿಕಾರಿ ಶಾಲಾ ಮುಖ್ಯೋಪಾಧ್ಯಾಯರು ದೇವರಾಜ್ ಎಸ್ ಕೆ, ಪೋಷಕರಾದ ಗಂಗಾಧರ ಗೌಡ ದೋಳ ಉಪಸ್ಥಿತರಿದ್ದರು