ಪೆರುವಾಜೆ ಡಾ. ಶಿವರಾಮ ಕಾರಂತ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆ ದಿನಾಚರಣೆ

0

ಬೆಳ್ಳಾರೆಯ ಪೆರುವಾಜೆ ಡಾ. ಕೆ. ಶಿವರಾಮ ಕಾರಂತ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆ ದಿನಾಚರಣೆಯು ಸೆ.27ರಂದು ನಡೆಯಿತು.

ಕಾಲೇಜಿನ ಪ್ರಾಂಶುಪಾಲ ದಾಮೋದರ ಕಣಜಾಲು ಅವರು ಅಧ್ಯಕ್ಷತೆ ವಹಿಸಿ, ಮಾತನಾಡಿ ರಾಷ್ಟ್ರೀಯ ಸೇವಾ ಯೋಜನೆ ಘಟಕವು ವಿದ್ಯಾರ್ಥಿಗಳಲ್ಲಿ ರಚನಾತ್ಮಕತೆ ಬೆಳೆಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ ಎಂದು ಶುಭಹಾರೈಸಿದರು‌.

ನಿವೃತ್ತ ಗ್ರಂಥಪಾಲಕ ರಾಮಚಂದ್ರ ರವರು ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿ ಮಾತನಾಡಿ ‘ವಿದ್ಯಾರ್ಥಿಗಳಲ್ಲಿ ರಾಷ್ಟ್ರಕ್ಕಾಗಿ ಸೇವೆ ಸಲ್ಲಿಸುವ ಮನೋಭಾವ ಮತ್ತು ಗುರಿಯ ಕಡೆಗೆ ನಡೆಯಲು ಬೇಕಾದ ಶಿಸ್ತು – ಬದ್ಧತೆ ರೂಢಿಸಿಕೊಳ್ಳುವಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಘಟಕ ಅತ್ಯಂತ ಪರಿಣಾಮಕಾರಿ’ ಎಂದು ಹೇಳಿದರು.

ಎನ್.ಎಸ್.ಎಸ್. ಘಟಕದ ಕಾರ್ಯಕ್ರಮ ಅಧಿಕಾರಿ ಗಿರೀಶ್ ಸಿ.ಆರ್. ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು. ಕು. ಖ್ಯಾತಿ ಕಾರ್ಯಕ್ರಮ ನಿರೂಪಿಸಿ, ಶಿವರಾಜು ಸ್ವಾಗತಿಸಿ ಮತ್ತು ಕು. ಕಾವ್ಯ ವಂದಿಸಿದರು.