ಸಂಪ್ಯಾಡಿ ಅಂಗನವಾಡಿ ಕೇಂದ್ರದಲ್ಲಿ ಗಾಂಧಿ ಜಯಂತಿ ಆಚರಣೆ ಹಾಗೂ ಸ್ವಚ್ಛತಾ ಕಾರ್ಯಕ್ರಮ

0

ಸಂಪ್ಯಾಡಿ ಅಂಗನವಾಡಿ ಕೇಂದ್ರದಲ್ಲಿ ಗಾಂಧಿ ಜಯಂತಿ ಆಚರಣೆ ಹಾಗೂ ಸ್ವಚ್ಛತಾ ಕಾರ್ಯಕ್ರಮ ಅ. 2ರಂದು ನಡೆಯಿತು.
ಕಾರ್ಯಕ್ರಮದ ಉದ್ಘಾಟನೆಯನ್ನು ಬಾಲವಿಕಾಸ ಸಮಿತಿ ಅಧ್ಯಕ್ಷೆ ಶ್ರೀಮತಿ ವನಜ ಬಿ ನೆರವೇರಿಸಿದರು.

ವೇದಿಕೆಯಲ್ಲಿ ಸ್ತ್ರೀಶಕ್ತಿ ಸಂಘದ ಸದಸ್ಯೆ ಶ್ರೀಮತಿ ಯಶೋಧಾ ಎಸ್ ಹಾಗೂ ಶ್ರೀಮತಿ ರಂಜನಿ ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಬಾಲಚಂದ್ರ ಕಟ್ಟರವರು ಸಸಿಗಳನ್ನು ಕೊಟ್ಟು ಸಹಕರಿಸಿದರು. ಜಯಂತ್ ಕುಮಾರ್ ಕೊಠಾರಿ, ವಿದ್ಯಾರ್ಥಿಗಳು ಹಾಗೂ ಪೋಷಕರು ಉಪಸ್ಥಿತಿಯಲ್ಲಿ ಸಸಿ ನೆಡಲಾಯಿತು. ಸ್ತ್ರೀಶಕ್ತಿ ಸದಸ್ಯರುಗಳು ಅಂಗನವಾಡಿ ಸಹಾಯಕಿ ಮೋಹಿನಿ ವಿ.ಎಸ್ ಉಪಸ್ಥಿತರಿದ್ದರು ಕು ಜಶ್ನಿ ಎ.ಪಿ ಪ್ರಾರ್ಥಿಸಿದರು. ಅಂಗನವಾಡಿ ಕಾರ್ಯಕರ್ತೆ ಶ್ರೀಮತಿ ಯಮುನಾ ಕೆ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು