ಗೂನಡ್ಕ ತೆಕ್ಕಿಲ್ ಶಾಲೆಯಲ್ಲಿ ಗಾಂಧಿ ಜಯಂತಿ, ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಆಚರಣೆ

0

ಸಂಪಾಜೆ ಗ್ರಾಮದ. ಗೂನಡ್ಕದ ತೆಕ್ಕಿಲ್ ಆಂಗ್ಲ ಮಾಧ್ಯ ಶಾಲೆಯಲ್ಲಿ ಪೋಷಕರ ಸಮ್ಮುಖದಲ್ಲಿ ಗಾಂಧಿ ಜಯಂತಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿಯನ್ನು ಅ.2ರಂದು ಆಚರಿಸಲಾಯಿತು.

ಗಾಂಧಿಜಯಂತಿ ಅಂಗವಾಗಿ ಶಿಕ್ಷಕರು ಹಾಗೂ ವಿದ್ಯಾರ್ಥಿಗಳಿಂದ “ಸ್ವಚ್ಛತಾ ಹಿ ಸೇವಾ” ಕಾರ್ಯಕ್ರಮ ನಡೆಯಿತು. ಗಾಂಧೀಜಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆಗೈಯುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಲಾಯಿತು. ಗಾಂಧೀಜಿಯವರ ಚರಿತ್ರೆ ಮತ್ತು ತತ್ವಗಳಾದ ಸತ್ಯ ಮತ್ತು ಅಹಿಂಸೆಯ ಜೊತೆಗೆ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ‘ಜೈ ಜವಾನ್ ಜೈ ಕಿಸಾನ್ ‘ ಘೋಷಣೆ ಕೂಗಲಾಯಿತು.ಈ ಸಂದರ್ಭದಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮಹಾತ್ಮಾ ಗಾಂಧಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಕುರಿತಾದ ಹಾಡು ಹಾರಿಸಲಾಯಿತು.
ಈ ಸಂದರ್ಭದಲ್ಲಿ ಶಾಲೆಯ ಸ್ಥಾಪಕಾಧ್ಯಕ್ಷ ಟಿ. ಎಂ. ಶಹೀದ್ ತೆಕ್ಕಿಲ್, ಶಾಲಾ ಮುಖ್ಯೋಪಾಧ್ಯಾಯ ಸಂಪತ್ ಜೆ. ಡಿ., ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷ ಉನೈಸ್ ಪೆರಾಜೆ, ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷ ದಿನಕರ ಸಣ್ಣಮನೆ, ಗೌರವಾಧ್ಯಕ್ಷ ತಾಜ್ ಮಹಮ್ಮದ್, ಪೋಷಕರು, ಶಿಕ್ಷಕ ವೃಂದದವರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಶ್ರೀಮತಿ ಅನಿತಾ ಕಾರ್ಯಕ್ರಮವನ್ನು ನಿರೂಪಿಸಿದರು‌‌.