ಬೊಳುಬೈಲು ಸ.ಕಿ.ಪ್ರಾ.ಶಾಲೆಯಲ್ಲಿ ಗಾಂಧೀ ಜಯಂತಿ ಆಚರಣೆ

0

ದ.ಕ.ಅತ್ಯುತ್ತಮ ಶಿಕ್ಷಕಿ ಪ್ರಶಸ್ತಿ ಪಡೆದ ಶ್ರೀಮತಿ ರಾಧಮ್ಮರವರಿಗೆ ಸನ್ಮಾನ

ಸ.ಕಿ.ಪ್ರಾ.ಶಾಲೆ ಬೊಳುಬೈಲು ಇಲ್ಲಿ ಅ.೨ರಂದು ಗಾಂಧಿ ಜಯಂತಿ ಆಚರಣೆ ಹಾಗೂ ಸನ್ಮಾನ ಕಾರ್ಯಕ್ರಮ, ಹುಟ್ಟುಹಬ್ಬವನ್ನು ಆಚರಿಸಲಾಯಿತು. ಶಾಲಾ ಎಸ್‌ಡಿಎಂಸಿ ಅಧ್ಯಕ್ಷ ಬಾಲಸುಬ್ರಹ್ಮಣ್ಯ ಬೈತ್ತಡ್ಕರವರು ಮಹಾತ್ಮ ಗಾಂಧೀಜಿಯವರ ಭಾವಚಿತ್ರಕ್ಕೆ ಹೂ-ಹಾರ ಹಾಕಿ ದೀಪ ಪ್ರಜ್ವಲಿಸಿ ಕಾರ್ಯಕ್ರಮ ಉದ್ಘಾಟಿಸಿದರು.
೨೦೨೩-೨೦೨೪ನೇ ಸಾಲಿನ ದಕ್ಷಿಣ ಕನ್ನಡ ಅತ್ಯುತ್ತಮ ಶಿಕ್ಷಕಿ ಪ್ರಶಸ್ತಿ ಪಡೆದ ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ರಾಧಮ್ಮರವರಿಗೆ ಶಾಲಾ ಶಿಕ್ಷಕ ವೃಂದ ಮತ್ತು ವಿದ್ಯಾರ್ಥಿವೃಂದ, ಶಾಲಾಭಿವೃದ್ಧಿ ಸಮಿತಿ ಮತ್ತು ಶಾಲಾಭಿಮಾನಿಗಳ ಸಂಘದ ವತಿಯಿಂದ ಸನ್ಮಾನಿಸಲಾಯಿತು.


ಈ ಸಂದರ್ಭದಲ್ಲಿ ಶಾಲಾಭಿಮಾನಿಗಳ ಸಂಘದ ಅಧ್ಯಕ್ಷೆ ಶ್ರೀಮತಿ ಗೀತಾಗೋಪಿನಾಥ ಬೊಳುಬೈಲು, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬೊಳುಬೈಲು ಒಕ್ಕೂಟದ ಅಧ್ಯಕ್ಷ ಪದ್ಮನಾಭ ನೆಕ್ರಾಜೆ, ನವಚೇತನ ಯುವಕ ಮಂಡಲ ರಿ.ಬೊಳುಬೈಲು ಇದರ ಅಧ್ಯಕ್ಷ ಸುಭಾಷ್ ರೈ, ಬೊಳುಬೈಲು ಅಂಗನವಾಡಿ ಕಾರ್ಯಕರ್ತೆ ಶ್ರೀಮತಿ ಬೇಬಿಕುಮಾರಿ, ಶಾಲಾ ಸಹಶಿಕ್ಷಕಿ ವಾಣಿ ಪಿ.ಬಿ.ಉಪಸ್ಥಿತರಿದ್ದರು.
ನಿವೃತ ಶಿಕ್ಷಕ ವೀರಪ್ಪ ಗೌಡ ಮೊಟ್ಟೆಮನೆಯವರು ತಮ್ಮ ಜನ್ಮದಿನದ ಪ್ರಯುಕ್ತ ಸೇರಿದ ಎಲ್ಲರಿಗೂ ಸಿಹಿ ತಿಂಡಿ ನೀಡಿ ಸಂಭ್ರಮಿಸಿದರು.
ಶಿಕ್ಷಕಿ ಶ್ರೀಮತಿ ರಾಧಮ್ಮರವರು ಸಹಕರಿಸಿ ಎಲ್ಲರಿಗೂ ಕೃತಜ್ಞತೆ ಸಲ್ಲಿಸಿ, ಮುಂದೆಯೂ ಶಾಲಾಭಿವೃದ್ಧಿ ಕೆಲಸದಲ್ಲಿ ಕೈ ಜೋಡಿಸಬೇಕೆಂದು ಸೇರಿದವರಲ್ಲಿ ಕೇಳಿಕೊಂಡು, ಧನ್ಯವಾದ ಗೈದರು.
ಶಿಕ್ಷಕಿ ಶ್ರೀಮತಿ ವಾಣಿ ಪಿ.ಬಿ.ಕಾರ್ಯಕ್ರಮ ನಿರೂಪಿಸಿ, ರಾಷ್ಟçಗೀತೆಯೊಂದಿಗೆ ಕಾರ್ಯಕ್ರಮ ಮುಕ್ತಾಯವಾಯಿತು.