ಕೊಡಗು ಮತ್ತು ದ.ಕ.ಗೌಡ ಸಮಾಜ ಬೆಂಗಳೂರು ಇದರ ಅಧ್ಯಕ್ಷರಾಗಿ ರವೀಂದ್ರನಾಥ್ ಕೇವಳ, ಕಾರ್ಯದರ್ಶಿ ನಾಗೇಶ್ ಕುಮಾರ್ ಕಲ್ಲುಮುಟ್ಲು ಅವಿರೋಧವಾಗಿ ಆಯ್ಕೆ

0

ಕೊಡಗು ಮತ್ತು ದಕ್ಷಿಣ ಕನ್ನಡ ಗೌಡ ಸಮಾಜ , ಬೆಂಗಳೂರು ಇದರ 2023-2025 ನೇ ಸಾಲಿನ ಅಧ್ಯಕ್ಷರಾಗಿ ರವೀಂದ್ರನಾಥ್ ಕೇವಳ ಹಾಗೂ ಉಪಾಧ್ಯಕ್ಷರಾಗಿ ಪಾಣತ್ತಲೆ ಪಳಂಗಪ್ಪಂನವರು ಅವಿರೋಧವಾಗಿ ಆಯ್ಕೆಯಾದರು.
ಅ.07 ರಂದು ಬೆಂಗಳೂರಿನಲ್ಲಿ ನಡೆದ ಆಡಳಿತ ಮಂಡಳಿ ಸಭೆಯಲ್ಲಿ ಅಧ್ಯಕ್ಷರಾಗಿ ರವೀಂದ್ರನಾಥ್ ಕೇವಳ ಉಪಾಧ್ಯಕ್ಷರಾಗಿ ಶ್ರೀ ಪಾಣತ್ತಲೆ ಪಳಂಗಪ್ಪ, ಕಾರ್ಯದರ್ಶಿಯಾಗಿ ನಾಗೇಶ್ ಕುಮಾರ್ ಕಲ್ಲುಮುಟ್ಲು , ಖಜಾಂಜಿಯಾಗಿ ಕುಂಭಗೌಡನ ಸೋಮಣ್ಣ ಹಾಗೂ ಜಂಟಿ ಕಾರ್ಯದರ್ಶಿಗಳಾಗಿ ನಾಗೇಶ್ ಬಂಟೋಡಿ ಉಳುವಾರನ ಇವರುಗಳು ಅವಿರೋಧವಾಗಿ ಆಯ್ಕೆಯಾಗಿರುತ್ತಾರೆ.