ಇಲಾಖೆಯ ಮೈಸೂರು ವಿಭಾಗ ಮಟ್ಟದ ಯೋಗ ಸ್ಪರ್ಧೆಯಲ್ಲಿ ಜ್ಞಾನದೀಪ ಎಲಿಮಲೆಯ ವಿದ್ಯಾರ್ಥಿ ತನುಷ್. ಎಮ್. ಎಚ್. ರಾಜ್ಯಮಟ್ಟಕ್ಕೆ

0

ಜಿಲ್ಲಾಡಳಿತ ಉಡುಪಿ ಹಾಗೂ ಜಿಲ್ಲಾ ಪಂಚಾಯತ್ ಉಡುಪಿ, ಶಾಲಾ ಶಿಕ್ಷಣ ಇಲಾಖೆ, ಅಮೃತ ಭಾರತಿ ಸಮೂಹ ಶಿಕ್ಷಣ ಸಂಸ್ಥೆಗಳು ಹೆಬ್ರಿ ಇವುಗಳ ಆಶ್ರಯದಲ್ಲಿ, ಅಮೃತ ಭಾರತಿ ಶಿಕ್ಷಣ ಸಂಸ್ಥೆ ಹೆಬ್ರಿಯಲ್ಲಿ ನಡೆದ ಶಾಲಾ ಶಿಕ್ಷಣ ಇಲಾಖೆಯ  ಮೈಸೂರು ವಿಭಾಗ ಮಟ್ಟದ ಯೋಗ ಸ್ಪರ್ಧೆಯಲ್ಲಿ ಜ್ಞಾನದೀಪ ವಿದ್ಯಾ ಸಂಸ್ಥೆ ಎಲಿಮಲೆ ಇಲ್ಲಿಯ 7ನೇ ತರಗತಿ ವಿದ್ಯಾರ್ಥಿ ತನುಶ್.ಎಮ್.ಹೆಚ್. ಪ್ರಾಥಮಿಕ ಶಾಲಾ ಬಾಲಕರ ವಿಭಾಗದಲ್ಲಿ ತೃತಿಯ ಸ್ಥಾನ ಪಡೆದು ರಾಜ್ಯಮಟ್ಟದ ಯೋಗ ಸ್ಪರ್ಧೆಗೆ ಆಯ್ಕೆಯಾಗಿರುತ್ತಾರೆ.


ಅಲ್ಲದೆ ಇದೇ ಸಂದರ್ಭದಲ್ಲಿ ನಡೆದ ಶಿಕ್ಷಣ ಇಲಾಖೆಯ ಕುಮಾರ ಯೋಗ ಪ್ರಶಸ್ತಿ ಸ್ಪರ್ಧೆಯಲ್ಲಿಯೂ ಪ್ರಥಮ ಸ್ಥಾನ ಪಡೆದಿರುತ್ತಾರೆ. ಇವರು ಅಕ್ಟೋಬರ್ 20ರಂದು ಚಿತ್ರದುರ್ಗದಲ್ಲಿ ನಡೆಯಲಿರುವ ರಾಜ್ಯಮಟ್ಟದ ಯೋಗ ಸ್ಪರ್ಧೆಯಲ್ಲಿ ಮೈಸೂರು ವಿಭಾಗವನ್ನು ಪ್ರತಿನಿಧಿಸಲಿದ್ದಾರೆ.