ರಾಜ್ಯ ಮಟ್ಟದ ನಾಯಕತ್ವ ತರಬೇತಿ ಶಿಬಿರದಲ್ಲಿ ಭಾಗವಹಿಸಲು ಡಾ. ಅನುರಾಧಾ ಕುರುಂಜಿ

0

ಸುಳ್ಯದ ವ್ಯಕ್ತಿತ್ವ ವಿಕಸನ ತರಬೇತುದಾರರಾದ ಡಾ. ಅನುರಾಧಾ ಕುರುಂಜಿಯವರು ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ತು, ಬೆಂಗಳೂರು ಇವರು ಅಕ್ಟೋಬರ್ 14 ಮತ್ತು 15 ರಂದು ಬೆಂಗಳೂರಿನ ದೊಡ್ಡಬಳ್ಳಾಪುರದ ಬೆಸೆಂಟ್ ಪಾರ್ಕ್ ನಲ್ಲಿ ಹಮ್ಮಿಕೊಂಡ “ನಾನೂ,,,,,,ನಾಯಕ-23” ಎಂಬ ರಾಜ್ಯ ಮಟ್ಟದ ನಾಯಕತ್ವ ತರಬೇತಿ ಶಿಬಿದದಲ್ಲಿ ಸುಳ್ಯ ತಾಲೂಕನ್ನು ಪ್ರತಿನಿಧಿಸಲಿದ್ದಾರೆ. ಕರ್ನಾಟಕ ಘನ ಸರಕಾರದ ಸಚಿವರುಗಳ ಉಪಸ್ಥಿತಿಯಲ್ಲಿ ಉದ್ಘಾಟನೆಗೊಳ್ಳುವ ಈ ತರಬೇತಿ ಶಿಬಿರದಲ್ಲಿ ಅಂತಾರಾಷ್ಟ್ರೀಯ ವ್ಯಕ್ತಿತ್ವ ವಿಕಸನ ತರಬೇತುದಾರರು ವಿವಿಧ ವಿಷಯಗಳಲ್ಲಿ ತರಬೇತಿ ನೀಡಲಿದ್ದಾರೆ. ತರಬೇತಿ ಶಿಬಿರದ “ ನಾನೂ ಮಹಿಳೆ, ನನ್ನ ನಡಿಗೆ ಎತ್ತ” ಅಧಿವೇಶನದ ಕಾರ್ಯಕ್ರಮ ನಿರೂಪಣೆಯನ್ನು ಮಾಡಲಿರುವ ಡಾ ಅನುರಾಧಾ ಕುರುಂಜಿಯವರು ದಕ್ಷಿಣ ಕನ್ನಡ ಜಿಲ್ಲೆಯ ವೈಜ್ಞಾನಿಕ ಸಂಶೋಧನಾ ಪರಿಷತ್ ನ ಉಪಾಧ್ಯಕ್ಷರೂ ಆಗಿದ್ದಾರೆ.