ಅ. 15: ಸವಣೂರಿನಲ್ಲಿ ಆದರ್ಶ ಸೊಸೈಟಿಯ ನೂತನ ಕಟ್ಟಡಕ್ಕೆ ಶಂಕುಸ್ಥಾಪನೆ

0

ಪುತ್ತೂರಿನ ದರ್ಬೆಯ ಪ್ರಶಾಂತ್ ಮಹಲ್ ನಲ್ಲಿ ಪ್ರಧಾನ ಕಚೇರಿ ಹೊಂದಿರುವ ಸವಣೂರು ಕೆ. ಸೀತಾರಾಮ ರೈಯವರು ಅಧ್ಯಕ್ಷರಾಗಿರುವ ಆದರ್ಶ ವಿವಿಧೋದ್ದೇಶ ಸಹಕಾರಿ ಸಂಘದ ನೂತನ ಕಟ್ಟಡಕ್ಕೆ ಸವಣೂರಿನಲ್ಲಿ ಶಂಕುಸ್ಥಾಪನೆ ಕಾರ್ಯಕ್ರಮ ಅ. 15ರಂದು‌ ನಡೆಯಲಿದೆ.


ಶ್ರೀ ಗುರುದೇವದತ್ತ ಸಂಸ್ಥಾನಂ ಶ್ರೀ ಕ್ಷೇತ್ರ ಒಡಿಯೂರು ಇಲ್ಲಿಯ ಪರಮಪೂಜ್ಯ ಗುರುದೇವಾನಂದ ಸ್ವಾಮೀಜಿಯವರು ಶಂಕುಸ್ಥಾಪನೆ ನೆರವೇರಿಸಿ ಆಶೀರ್ವಚನ ನೀಡಲಿದ್ದಾರೆ. ಸುಳ್ಯದ ಶಾಸಕಿ ಕು. ಭಾಗೀರಥಿ ಮುರುಳ್ಯ ಸಭಾಧ್ಯಕ್ಷತೆ ವಹಿಸಲಿದ್ದಾರೆ. ಕಡಬ ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಭವಾನಿಶಂಕರ್ ಎನ್, ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ನಿರ್ದೇಶಕ ಶಶಿಕುಮಾರ್ ರೈ ಬಾಲ್ಯೊಟ್ಟು ಮತ್ತು ಸವಣೂರು ಗ್ರಾ.ಪಂ. ಅಧ್ಯಕ್ಷೆ ಶ್ರೀಮತಿ ಸುಂದರಿ ಬಿ.ಎಸ್ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ಸಂಸ್ಥೆಯ ಅಧ್ಯಕ್ಷರಾದ ಸವಣೂರು ಕೆ. ಸೀತಾರಾಮ ರೈ, ಮಹಾಪ್ರಬಂಧಕರಾದ ವಸಂತ್ ಜಾಲಾಡಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.