ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ವಿರಾಜಪೇಟೆ ಶಾಸಕ ಎ.ಎಸ್. ಪೊನ್ನಣ್ಣ ಮತ್ತು ಮಡಿಕೇರಿ ಶಾಸಕ ಡಾ. ಮಂತರ್ ಗೌಡರಿಗೆ ಸುಳ್ಯ ದಸರಾ ಕಾರ್ಯಕ್ರಮಕ್ಕೆ ಆಹ್ವಾನ

0

ಸುಳ್ಯ ದಸರಾ ಕಾರ್ಯಕ್ರಮ ದಿನಾಂಕ ಅ.20ರಿಂದ ಅ.28ರವರೆಗೆ ಸುಳ್ಯದಲ್ಲಿ ಅದ್ದೂರಿಯಾಗಿ ನಡೆಯಲಿದ್ದು, ಸುಳ್ಯ ದಸರಾ ಕಾರ್ಯಕ್ರಮದ ಸಮಾರೋಪ
ಕಾರ್ಯಕ್ರಮ ಅ.27ರಂದು ನಡೆಯಲಿದ್ದು ಮುಖ್ಯ ಅತಿಥಿಗಳಾಗಿ ಆಗಮಿಸುವಂತೆ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ, ವಿರಾಜಪೇಟೆ ಶಾಸಕ ಎ ಎಸ್ ಪೊನ್ನಣ್ಣ ಹಾಗೂ ಮಡಿಕೇರಿ ಶಾಸಕ ಡಾ. ಮಂತರ್ ಗೌಡರಿಗೆ ಸುಳ್ಯ ಶಾರದಾಂಬಾ ಸೇವಾ ಸಮಿತಿಯ ಗೌರವಾಧ್ಯಕ್ಷ ಕೆ ಗೋಕುಲ್ ದಾಸ್, ಸಮಿತಿಯ ಪದಾಧಿಕಾರಿಗಳಾದ ತೀರ್ಥರಾಮ ಜಾಲ್ಸೂರ್, ಎಂ ಕೆ ಸತೀಶ್ ಆಮಂತ್ರಣ ನೀಡಿದರು. ಈ ಸಂದರ್ಭದಲ್ಲಿ ಕೆಪಿಸಿಸಿ ಸದಸ್ಯ ಹೆಚ್ ಎಂ ನಂದಕುಮಾರ್ ಹಾಗೂ ಪ್ರಮುಖರಾದ ಭವಾನಿ ಶಂಕರ್ ಕಲ್ಮಡ್ಕ, ಕೆ ಟಿ ಭಾಗೀಶ್ ಉಪಸ್ಥಿತರಿದ್ದರು