ಅಡ್ಕಾರು: ರಸ್ತೆ ದಾಟುತ್ತಿದ್ದ ದನಕ್ಕೆ ಕಾರು ಢಿಕ್ಕಿ ಹೊಡೆದು ನಿಲ್ಲಿಸದೆ ಪರಾರಿ

0

ಗಂಭೀರವಾಗಿ ಗಾಯಗೊಂಡ ದನ ಸ್ಥಳದಲ್ಲೇ ಮೃತ್ಯು

ಕಾರು ಢಿಕ್ಕಿ ಹೊಡೆದು ನಿಲ್ಲಿಸದೆ ಪರಾರಿಯಾಗಿದ್ದು, ಗಂಭೀರವಾಗಿ ಗಾಯಗೊಂಡ ದನ ಸ್ಥಳದಲ್ಲೇ ಸಾವಿಗೀಡಾದ ಘಟನೆ ಜಾಲ್ಸೂರು ಗ್ರಾಮದ ಅಡ್ಕಾರಿನಲ್ಲಿ ಅ.16ರಂದು ಅಪರಾಹ್ನ ಸಂಭವಿಸಿದೆ.

ಸುಳ್ಯ ಕಡೆಯಿಂದ ಪುತ್ತೂರು ಕಡೆಗೆ ಹೋಗುತ್ತಿದ್ದ ಕಾರು ಅತೀ ವೇಗವಾಗಿ ಬಂದು ಅಡ್ಕಾರಿನ ನ್ಯಾಯಬೆಲೆ ಅಂಗಡಿಯ ಮುಂಭಾಗದ ಬಳಿ ಮುಖ್ಯರಸ್ತೆ ದಾಟುತ್ತಿದ್ದ ದನಕ್ಕೆ ಢಿಕ್ಕಿ ಹೊಡೆದು ನಿಲ್ಲಿಸದೇ ಪರಾರಿಯಾಗಿದ್ದು, ಢಿಕ್ಕಿ ಹೊಡೆದ ರಭಸಕ್ಕೆ ದನ ಸ್ಥಳದಲ್ಲೇ ಸಾವಿಗೀಡಾಗಿರುವುದಾಗಿ ತಿಳಿದುಬಂದಿದೆ.
ತಕ್ಷಣ ಸ್ಥಳೀಯರು ಬಂದು ದನಕ್ಕೆ ನೀರು ಕುಡಿಸಿ ಆರೈಕೆ ಮಾಡಿದರಾದರೂ, ಆ ವೇಳೆ ದನ ಅಸುನೀಗಿತ್ತು. ವಿಷಯ ತಿಳಿದು ಸುಳ್ಯದಿಂದ ಪಶು ವೈದ್ಯಾಧಿಕಾರಿಗಳು ಸ್ಥಳಕ್ಕೆ ಬಂದಿದ್ದು, ದನದ ಪರೀಕ್ಷೆ ನಡೆಸಿರುವುದಾಗಿ ತಿಳಿದುಬಂದಿದೆ.