ಕನಕಮಜಲು: ಮುಗೇರು – ಮಾಣಿಮಜಲು ಶಾಲೆಗೆ ಪ್ರಿಂಟರ್ ಕೊಡುಗೆ

0

ಕನಕಮಜಲು ಗ್ರಾಮದ ಮುಗೇರು ಮಾಣಿಮಜಲು ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ನವರಾತ್ರಿ ಹಬ್ಬದ ಪ್ರಯುಕ್ತ ಶಾರದಾ ಪೂಜೆ ಹಾಗೂ ಪ್ರಿಂಟರ್ ಕೊಡುಗೆ ಕಾರ್ಯಕ್ರಮವು ಅ.20ರಂದು ನಡೆಯಿತು.
ಈ ಸಂದರ್ಭದಲ್ಲಿ ದಿ. ಪದ್ಮನಾಭ ಗೌಡ ಕುತ್ಯಾಳ ಅವರ ಸ್ಮರಣಾರ್ಥ ಅವರ ಪತ್ನಿ ಶ್ರೀಮತಿ ಮೀನಾಕ್ಷಿ ಕುತ್ಯಾಳರವರು ಶಾಲೆಗೆ ಪ್ರಿಂಟರನ್ನು ಕೊಡುಗೆಯಾಗಿ ನೀಡಿದರು.

ಈ ಸಂದರ್ಭದಲ್ಲಿ ಶಾಲಾ ಎಸ್.ಡಿ.ಎಂ.ಸಿ. ಅಧ್ಯಕ್ಷ ವೆಂಕಪ್ಪ ನಾಯ್ಕ ದೇರ್ಕಜೆ , ಎಸ್.ಡಿ.ಎಂ.ಸಿ. ಸದಸ್ಯರುಗಳು, ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ರತಿ, ಸಹಶಿಕ್ಷಕರು, ಪೋಷಕರು, ವಿದ್ಯಾರ್ಥಿಗಳು,ಹಳೆ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.