ಸುಳ್ಯ: 52ನೇ ವರ್ಷದ ಶಾರದಾಂಬ ಉತ್ಸವ ದಸರಾ 2023

0

ಪದ್ಮಶ್ರೀ ಡಾ. ಗಿರೀಶ್ ಭಾರದ್ವಾಜ್ ಅವರಿಂದ ಸಾಂಸ್ಕೃತಿಕ ಕಾರ್ಯಕ್ರಮಗಳ ಉದ್ಘಾಟನೆ

ಸುಳ್ಯದ ಶ್ರೀ ಶಾರದಾಂಬ ದಸರಾ ಸೇವಾ ಟ್ರಸ್ಟ್ , ಶ್ರೀ ಶಾರದಾಂಬ ಸೇವಾ ಸಮಿತಿ, ದಸರಾ ಉತ್ಸವ ಸಮಿತಿಯ ವತಿಯಿಂದ ನಡೆಯುತ್ತಿರುವ 52ನೇ ವರ್ಷದ ಶ್ರೀ ಶಾರದಾಂಬ ಉತ್ಸವ ಸುಳ್ಯ ದಸರಾ 2023 ಸಾಂಸ್ಕೃತಿಕ ಕಾರ್ಯಕ್ರಮವನ್ನು ತೂಗುಸೇತುವೆಗಳ ಸರದಾರ ಪದ್ಮಶ್ರೀ ಪುರಸ್ಕೃತ ಡಾ. ಗಿರೀಶ್ ಭಾರದ್ವಾಜ್ ಅವರು ದೀಪಬೆಳಗಿಸಿ, ಉದ್ಘಾಟಿಸಿ, ಶುಭಹಾರೈಸಿದರು‌.

ಸಾರ್ವಜನಿಕ ಶ್ರೀ ಶಾರದಾಂಬ ಸೇವಾ ಸಮಿತಿ ಅಧ್ಯಕ್ಷ ಚಿದಾನಂದ ವಿದ್ಯಾನಗರ ಅವರು ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಶ್ರೀ ಶಾರದಾಂಬ ಸೇವಾ ಸಮಿತಿ ಗೌರವಾಧ್ಯಕ್ಷ ಗೋಕುಲ್ ದಾಸ್, ದಸರಾ ಸೇವಾ ಟ್ರಸ್ಟ್ ಉಪಾಧ್ಯಕ್ಷರುಗಳಾದ ನಾರಾಯಣ ಕೇಕಡ್ಕ, ಬೂಡು ರಾಧಾಕೃಷ್ಣ ರೈ, ದಸರಾ ಸೇವಾ ಟ್ರಸ್ಟ್ ಪ್ರಧಾನ ಕಾರ್ಯದರ್ಶಿ ಎಂ.ಕೆ. ಸತೀಶ್, ಶ್ರೀ ಶಾರದಾಂಬ ಸೇವಾ ಸಮಿತಿ ಪ್ರಧಾನ ಕಾರ್ಯದರ್ಶಿ ರವಿಚಂದ್ರ ಕೊಡಿಯಾಲಬೈಲು, ದಸರಾ ಸೇವಾ ಟ್ರಸ್ಟ್ ಕೋಶಾಧಿಕಾರಿ ಪುರುಷೋತ್ತಮ ನಾವೂರು, ಶ್ರೀ.ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜಿಲ್ಲಾ ನಿರ್ದೇಶಕ ಪ್ರವೀಣ್ ಕುಮಾರ್, ಸಂತೃಪ್ತಿ ರೆಸ್ಟೋರೆಂಟ್ ನವೀನ್ ಕುಮಾರ್ ಕೆ.ಟಿ., ಅನ್ನಪೂರ್ಣ ಎಲೆಕ್ಟ್ರಿಕಲ್ಸ್ ನ ಮಧುಕಿರಣ್ ಕೆ.ಎನ್. ವೇದಿಕೆಯಲ್ಲಿ ಉಪಸ್ಥಿತರಿದ್ದರು.