ವಿನೋಬನಗರ: ವಿವೇಕಾನಂದ ವಿದ್ಯಾಸಂಸ್ಥೆಯಲ್ಲಿ ಆಯುಧ ಪೂಜೆ

0

ಜಾಲ್ಸೂರು ಗ್ರಾಮದ ವಿನೋಬನಗರದ ವಿವೇಕಾನಂದ ವಿದ್ಯಾಸಂಸ್ಥೆಯಲ್ಲಿ ನವರಾತ್ರಿ ಪ್ರಯುಕ್ತ ಶಾರದಾ ಪೂಜೆ ಮತ್ತು ಆಯುಧ ಪೂಜಾ ಕಾರ್ಯಕ್ರಮವು ಅ.20ರಂದು ನಡೆಯಿತು.

ಪುರೋಹಿತ ಕೃಪಾಕರ್ ಅವರ ನೇತೃತ್ವದಲ್ಲಿ ವಿದ್ಯಾಸಂಸ್ಥೆಯಲ್ಲಿ ಶಾರದಾ ಪೂಜೆ ಹಾಗೂ ಆಯುಧ ಪೂಜೆಯನ್ನು ನೆರವೇರಿಸಲಾಯಿತು.

ಈ ಸಂದರ್ಭದಲ್ಲಿ ವಿದ್ಯಾಸಂಸ್ಥೆಯ ಸಂಚಾಲಕ ಸುಧಾಕರ ಕಾಮತ್ ವಿನೋಬನಗರ, ಶಾಲಾ ಎಸ್.ಡಿ. ಎಂ. ಸಿ. ಉಪಾಧ್ಯಕ್ಷ ರವಿರಾಜ್ ಗಬ್ಬಲಡ್ಕ ,ಸದಸ್ಯರಾದ ಶ್ರೀಮತಿ ಪದ್ಮಿನಿ ಲೋಕೇಶ, ಪ್ರೌಢ ಶಾಲಾ ಮುಖ್ಯೋಪಾಧ್ಯಾಯ ಗಿರೀಶ್ ಕುಮಾರ್, ಪ್ರಾಥಮಿಕ ಶಾಲಾ ಮುಖ್ಯೋಪಾದ್ಯಯ ಜಯಪ್ರಸಾದ್ ಕಾರಿಂಜ ಶಾಲಾ ಸಹಶಿಕ್ಷಕ ವೃಂದದವರು ಹಾಗೂ ಪೋಷಕ ವೃಂದದವರು ಉಪಸ್ಥಿತರಿದ್ದರು.