ಯೋಗೇನ ಚಿತ್ತಸ್ಯ ಯೋಗ ಕೇಂದ್ರ‌ದ ವಿದ್ಯಾರ್ಥಿಗಳು ರಾಷ್ಟ್ರಮಟ್ಟಕ್ಕೆ ಆಯ್ಕೆ

0

ತರಳಬಾಳು ಜಗದ್ಗುರು ವಿದ್ಯಾಸಂಸ್ಥೆ ಸಿರಿಗೆರೆ ಮತ್ತು ಉಪ ನಿರ್ದೇಶಕರ ಕಛೇರಿ, ಶಾಲಾ ಶಿಕ್ಷಣ ಇಲಾಖೆ ಚಿತ್ರದುರ್ಗ ಇದರ ಸಂಯುಕ್ತ ಆಶ್ರಯದಲ್ಲಿ ಅ. 20 ರಂದು ನಡೆದ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿಭಾಗದ ಬಾಲಕ ಹಾಗೂ ಬಾಲಕಿಯರ ವಿಭಾಗದ ರಾಜ್ಯಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ಪ್ರಾಥಮಿಕ ಬಾಲಕರ ವಿಭಾಗದಲ್ಲಿ ಮೋನಿಷ್ ತಂಟೆಪ್ಪಾಡಿ‌ ಚತುರ್ಥ ಸ್ಥಾನ‌, ಇವರು ಅಮರಮುಡ್ನೂರು ಗ್ರಾಮದ ತಂಟೆಪ್ಪಾಡಿ ವಿಶ್ವನಾಥ ಹಾಗೂ ದಯಾಮಣಿ ದಂಪತಿಗಳ ಪುತ್ರ.

ಪ್ರಾಥಮಿಕ ಬಾಲಕಿಯರ ವಿಭಾಗದಲ್ಲಿ ಶ್ರೀಮ ಕೆ ಹೆಚ್ ಪಂಚಮ ಸ್ಥಾನ ಪಡೆದಿರುತ್ತಾರೆ. ಇವರು ಮುರುಳ್ಯ ಗ್ರಾಮದ ಹುದೇರಿ ಕುಶಾಲಪ್ಪ ಹಾಗೂ ಸುಜಿತಾ ದಂಪತಿಗಳ ಪುತ್ರಿ.ಇವರಿಬ್ಬರೂ ಮಧ್ಯಪ್ರದೇಶದಲ್ಲಿ ನಡೆಯುವ ರಾಷ್ಟ್ರಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ಕರ್ನಾಟಕ ರಾಜ್ಯವನ್ನು ಪ್ರತಿನಿಧಿಸಲಿದ್ದಾರೆ.

ಯೋಗಪಟುಗಳಾದ ತನುಷ್ ಕೆ ಆರ್, ತನುಷ್ ಎಂ ಹೆಚ್, ದೀಕ್ಷಾ ಹಾಗೂ ಮರ್ಮಿಭಾಗವಹಿಸಿದ್ದರು.ಇವರು ಯೋಗೇನ ಚಿತ್ತಸ್ಯ ಯೋಗ ಕೇಂದ್ರ‌ ವಿದ್ಯಾರ್ಥಿಗಳು. ಯೋಗಗುರು‌ ಸಂತೋಷ್ ಮುಂಡಕಜೆ ಮಾರ್ಗದರ್ಶನ ನೀಡಿರುತ್ತಾರೆ.