ಹಾಸನಡ್ಕ ಮಿತ್ರ ಕಲಾ- ಕ್ರೀಡಾ ಸಂಘದ ವತಿಯಿಂದ 10 ನೇ ವರ್ಷದ ಶಾರದಾ ಪೂಜೆ ಮತ್ತು ಆಯುಧ ಪೂಜೆ

0

ನಿವೃತ್ತ ಯೋಧರಿಗೆ ಸನ್ಮಾನ- ರಂಗಮಯೂರಿ ಕಲಾ ತಂಡದ ನೃತ್ಯ ವೈಭವ

ಅಮರಪಡ್ನೂರು ಗ್ರಾಮದ ಹಾಸನಡ್ಕ ಮಿತ್ರ ಕಲಾ ಮತ್ತು ಕ್ರೀಡಾ ಸಂಘದ ವತಿಯಿಂದ 10 ನೇ ವರ್ಷದ ಶ್ರೀ ಶಾರದಾ ಪೂಜೆ ಹಾಗೂ ಆಯುಧ ಪೂಜೆಯು ಅ.22 ರಂದು ಹಾಸನಡ್ಕ ಸ.ಕಿ.ಪ್ರಾ ಶಾಲಾ ಮೈದಾನದಲ್ಲಿ ನಡೆಯಿತು.

ಬೆಳಗ್ಗೆ ಸ್ಥಳೀಯ ಭಜಕರಿಂದ ಭಜನಾ ಕಾರ್ಯಕ್ರಮ ನಡೆದು ಅಂಗನವಾಡಿ ಮತ್ತು ಶಾಲಾ ಮಕ್ಕಳಿಗೆ ಸಾರ್ವಜನಿಕ ಪುರುಷರಿಗೆ ಮಹಿಳೆಯರಿಗೆ ಆಟೋಟ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು.
ಸಂಜೆ ಸ್ಥಳೀಯ ಶಾಲಾ ಮಕ್ಕಳಿಂದ ಹಳೆ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ಸುಳ್ಯದ ರಂಗಮಯೂರಿ ಕಲಾ ಶಾಲೆಯ ಕಲಾವಿದರಿಂದ ನೃತ್ಯ ವೈಭವ ಕಾರ್ಯಕ್ರಮ ನಡೆಯಿತು.

ಸಮಾರೋಪ ಸಮಾರಂಭ- ಸನ್ಮಾನ

ಮಿತ್ರ ಕಲಾ ಮತ್ತು ಕ್ರೀಡಾ ಸಂಘದ ಅಧ್ಯಕ್ಷ ಸುವಿನ್ ಉರುಂಬಿ ಅಧ್ಯಕ್ಷತೆಯಲ್ಲಿ ಸಮಾರೋಪ ಸಮಾರಂಭ ನಡೆಯಿತು.
ಈ ಸಂದರ್ಭದಲ್ಲಿ ನಿವೃತ್ತ ಯೋಧ ಸೀತಾರಾಮ ಚಿದ್ಗಲ್ ಮತ್ತು ಶ್ರೀಮತಿ ಮಮತಾ ದಂಪತಿಯನ್ನು ಸನ್ಮಾನಿಸಲಾಯಿತು.
ಮಾಜಿ ಸಚಿವ ಎಸ್.ಅಂಗಾರ ರವರು ನಿವೃತ್ತ ಯೋಧರನ್ನು ಸನ್ಮಾನಿಸಿದರು.
ಮುಖ್ಯ ಅತಿಥಿಗಳಾಗಿ ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ, ಕ.ಸಾ.ಪರಿಷತ್ ಕಾರ್ಯದರ್ಶಿ ತೇಜಸ್ವಿ ಕಡಪಳ, ಸುದ್ದಿ ವರದಿಗಾರ ಶಿವಪ್ರಸಾದ್ ಆಲೆಟ್ಟಿ, ಶಿಕ್ಷಕಿ ಶ್ರೀಮತಿ ಸುಲೋಚನಾ ಪೈಲೂರು, ಪಂಚಾಯತ್ ಸದಸ್ಯ ವೆಂಕಟ್ರಮಣ ಇಟ್ಟಿಗುಂಡಿ,ದಿವ್ಯ ಮಡಪ್ಪಾಡಿ, ಸಂಘದ ಸ್ಥಾಪಾಕಾಧ್ಯಕ್ಷ ಯತೀಶ್ ಹಿರಿಯಡ್ಕ ಉಪಸ್ಥಿತರಿದ್ದರು.


ಈ ಸಂದರ್ಭದಲ್ಲಿ ಅರುಣ್ ಕುಮಾರ್ ಪುತ್ತಿಲರನ್ನು ಸನ್ಮಾನಿಸಲಾಯಿತು. ಸ್ಪರ್ಧೆಯ ವಿಜೇತರಿಗೆ ಬಹುಮಾನ ವಿತರಿಸಲಾಯಿತು.
ಕು.ಇಂಚರ ಕೆ ಪ್ರಾರ್ಥಿಸಿದರು. ಯತೀಶ್ ಹಿರಿಯಡ್ಕ ಪ್ರಾಸ್ತಾವಿಕ ಮಾತಿನೊಂದಿಗೆ ಸ್ವಾಗತಿಸಿದರು. ಅಕ್ಷಯ್ ಹಿರಿಯಡ್ಕ ಬಹುಮಾನ ವಿಜೇತರ ಪಟ್ಟಿ ವಾಚಿಸಿದರು.
ನಿತಿನ್ ಕೆರೆಗದ್ದೆ ವಂದಿಸಿದರು. ಶಶಿಕಾಂತ್ ಮಿತ್ತೂರು ಕಾರ್ಯಕ್ರಮ ನಿರೂಪಿಸಿದರು. ಸಂಘದ ಪದಾಧಿಕಾರಿಗಳು ಮತ್ತು ಸದಸ್ಯರು ಸಹಕರಿಸಿದರು.