ಧರ್ಮಸ್ಥಳದಲ್ಲಿ 1753 ನೇ ಮದ್ಯವರ್ಜನ ಶಿಬಿರದ ಆಮಂತ್ರಣ ಪತ್ರ ಬಿಡುಗಡೆ

0

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್, ಜನಜಾಗೃತಿ ವೇದಿಕೆ ವತಿಯಿಂದ ಅಜ್ಜಾವರದಲ್ಲಿ ನಡೆಯಲಿರುವ
1753 ನೇ ಮದ್ಯವರ್ಜನ ಶಿಬಿರದ ಆಮಂತ್ರಣ ಪತ್ರಿಕೆಯನ್ನು ಧರ್ಮಸ್ಥಳದಲ್ಲಿ ಪೂಜ್ಯ ಡಾ: ಡಿ. ವೀರೇಂದ್ರ ಹೆಗ್ಗಡೆಯವರು ಇಂದು ಬಿಡುಗಡೆಗೊಳಿಸಿದರು.

ಸುಳ್ಯದಲ್ಲಿ ಗಾಂಧಿಸ್ಮೃತಿ ಹಾಗೂ ಜನಜಾಗೃತಿ ಸಮಾವೇಶವನ್ನು ಯಶಸ್ವಿಯಾಗಿ ನಿರ್ವಹಿಸಿದ ಜನಜಾಗೃತಿ ವೇದಿಕೆಯ ಅಧ್ಯಕ್ಷರನ್ನು ಮತ್ತು ಪದಾಧಿಕಾರಿಗಳನ್ನು ಖಾವಂದರು ಅಭಿನಂದಿಸಿದರು.

ಈ ಸಂದರ್ಭದಲ್ಲಿ ಅಖಿಲ ಕರ್ನಾಟಕ ಜನಜಾಗೃತಿ ನಿಕಟಪೂರ್ವ ಜಿಲ್ಲಾಧ್ಯಕ್ಷ ಎನ್. ಎ. ರಾಮಚಂದ್ರ, ತಾಲೂಕು ಅಧ್ಯಕ್ಷ ಲೋಕನಾಥ್ ಅಮೆಚೂರು, ತಾಲೂಕು ನಿಕಟಪೂರ್ವಾಧ್ಯಕ್ಷ ಮಹೇಶ್ ಕುಮಾರ್ ಮೇನಾಲ, ಪ್ರಗತಿಬಂಧು ಸ್ವಸಹಾಯ ಸಂಘಗಳ ತಾಲೂಕು ಅಧ್ಯಕ್ಷ ಸುರೇಶ್ ಕಣೆಮರಡ್ಕ, ಪೂರ್ವಾಧ್ಯಕ್ಷ ಬೂಡು ರಾಧಾಕೃಷ್ಣ ರೈ, ಮದ್ಯವರ್ಜನ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಶಿವಪ್ರಕಾಶ್ ಅಡ್ಪಂಗಾಯ, ತಾಲೂಕು ಯೋಜನಾಧಿಕಾರಿ ನಾಗೇಶ್ ಪಿ, ವಲಯ ಮೇಲ್ವಿಚಾರಕಿ ಶ್ರೀಮತಿ ವಿಶಾಲ ಕೆ, ಮದ್ಯವರ್ಜನ ಸಮಿತಿ ಉಪಾಧ್ಯಕ್ಷೆ ಶಶ್ಮಿ ಭಟ್ ಉಪಸ್ಥಿತರಿದ್ದರು.