ಬೆಂಗಳೂರಿನಲ್ಲಿ ನೆಲೆಸಿರುವ ಕನಕಮಜಲಿನ ಮಹಿಳೆ ಆತ್ಮಹತ್ಯೆ

0

ಬೆಂಗಳೂರಿನಲ್ಲಿ ನೆಲೆಸಿರುವ ಕನಕಮಜಲು ಗ್ರಾಮದ ಮಹಿಳೆಯೋರ್ವರು ಅಲ್ಲಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ಮಧ್ಯಾಹ್ನ ಸಂಭವಿಸಿದೆ.

ಉಬರಡ್ಕ ಮಿತ್ತೂರು ಗ್ರಾಮದ ಮದುವೆಗದ್ದೆ ಸುಬ್ರಹ್ಮಣ್ಯ ಗೌಡ ಹಾಗೂ ಶ್ರೀಮತಿ ಉಷಾ ದಂಪತಿಯ ಪುತ್ರಿ ಶ್ರೀಮತಿ ಐಶ್ವರ್ಯ ಅವರು ಬೆಂಗಳೂರಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದು, ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ.

ಐಶ್ವರ್ಯ ಅವರನ್ನು ಕೆಲವು ವರ್ಷದ ಹಿಂದೆ ಕನಕಮಜಲು ಗ್ರಾಮದ , ಪ್ರಸ್ತುತ ಬೆಂಗಳೂರಿನಲ್ಲಿ ಉದ್ಯಮಿಯಾಗಿರುವ ಗಿರಿಯಪ್ಪ ಗೌಡ ಅವರ ಪುತ್ರ ರಾಜೇಶ್ ಅವರಿಗೆ ಮದುವೆ ಮಾಡಿ ಕೊಡಲಾಗಿತ್ತು. ಬೆಂಗಳೂರಿನ ಸೆಟಲೈಟ್ ನಲ್ಲಿ ನೆಲೆಸಿದ್ದ ಇವರು ಇಂದು ಮಧ್ಯಾಹ್ನ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರಿಗೆ 23 ವರ್ಷ ವಯಸ್ಸಾಗಿತ್ತು.

ಮೃತರು ತಂದೆ ಸುಬ್ರಹ್ಮಣ್ಯ ಗೌಡ ಮದುವೆಗದ್ದೆ, ತಾಯಿ ಶ್ರೀಮತಿ ಉಷಾ , ಪತಿ ರಾಜೇಶ್ ಕಾಪಿಲ, ಸಹೋದರ ಸೂರ್ಯ, ಮಾವ ಗಿರಿಯಪ್ಪ ಗೌಡ ಕಾಪಿಲ ಸೇರಿದಂತೆ ಕುಟುಂಬಸ್ಥರನ್ನು ಅಗಲಿದ್ದಾರೆ.

ಐಶ್ವರ್ಯ ಅವರ ಮೃತದೇಹ ನಾಳೆ ಸುಳ್ಯಕ್ಕೆ ಬರಲಿದ್ದು, ಕನಕಮಜಲಿನಲ್ಲಿ ಅಂತ್ಯಸಂಸ್ಕಾರ ನೆರವೇರಲಿದೆ ಎಂದು ತಿಳಿದುಬಂದಿದೆ.