ಶ್ರೀ ಶಾರದಾಂಬ ಉತ್ಸವ ಸುಳ್ಯ ದಸರಾ 2023

0

ಇಂದು ಸಂಜೆ ಸಾಂಸ್ಕೃತಿಕ ಕಾರ್ಯಕ್ರಮದ ಸಮಾರೋಪ ಸಮಾರಂಭ – ರಾಜಕೀಯ ನಾಯಕರುಗಳ ಉಪಸ್ಥಿತಿ

ರಾತ್ರಿ ರಾಜ್ಯ ಮತ್ತು ಅಂತರ್ ರಾಜ್ಯ ಹಾಡುಗಾರರ ಸಮ್ಮಿಲನದೊಂದಿಗೆ ಸಂಗೀತ ರಸಮಂಜರಿ

ಸುಳ್ಯದ ಶ್ರೀ ಶಾರದಾಂಬ ದಸರಾ ಸೇವಾ ಟ್ರಸ್ಟ್ , ಶ್ರೀ ಶಾರದಾಂಬ ಸೇವಾ ಸಮಿತಿ, ದಸರಾ ಉತ್ಸವ ಸಮಿತಿಯ ವತಿಯಿಂದ ಶ್ರೀ ಚೆನ್ನಕೇಶವ ದೇವಾಲಯದ ಮುಂಭಾಗದ ಶಾರದಾಂಬ ಕಲಾವೇದಿಕೆಯಲ್ಲಿ ನಡೆಯುತ್ತಿರುವ 52ನೇ ವರ್ಷದ ಶ್ರೀ ಶಾರದಾಂಬ ಉತ್ಸವ ಸುಳ್ಯ ದಸರಾ 2023 ಸಾಂಸ್ಕೃತಿಕ ಕಾರ್ಯಕ್ರಮದ ಸಮಾರೋಪ ಸಮಾರಂಭವು ಇಂದು ಸಂಜೆ ನಡೆಯಲಿದೆ.

ಶಾಸಕಿ ಭಾಗೀರಥಿ ಮುರುಳ್ಯ ಅವರು ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಸಂಸದ ನಳಿನ್ ಕುಮಾರ್ ಕಟೀಲ್, ವಿರಾಜಪೇಟೆ ಶಾಸಕ ಎ.ಎಸ್. ಪೊನ್ನಣ್ಣ, ಮಾಜಿ ಸಚಿವರುಗಳಾದ ಬಿ. ರಮಾನಾಥ ರೈ, ಎಸ್. ಅಂಗಾರ, ಮಂಗಳೂರು ಉತ್ತರ ಶಾಸಕ ಭರತ್ ಶೆಟ್ಟಿ, ಮಡಿಕೇರಿ ಶಾಸಕ ಮಂತರ್ ಗೌಡ, ಉದ್ಯಮಿ ನಂದಕುಮಾರ್, ಚಲನಚಿತ್ರ ನಿರ್ಮಾಪಕರಾದ ಸಂತೋಷ್ ಕೊಡಂಕೇರಿ, ಶ್ರೀಮತಿ ಪಾವನಾ ಸಂತೋಷ್ ಕೊಡಂಕೇರಿ, ಮಾಂಡವಿ ಮೋಟರ್ಸ್ ನ ಸುರೇಶ್ ಎ.ಜಿ. ಸೇರಿದಂತೆ ಶ್ರೀ ಶಾರದಾಂಬ ಸೇವಾ ಸಮಿತಿಯ ಪದಾಧಿಕಾರಿಗಳು, ದಸರಾ ಸೇವಾ ಟ್ರಸ್ಟ್ ಪದಾಧಿಕಾರಿಗಳು ಭಾಗವಹಿಸಲಿದ್ದಾರೆ.
ರಾತ್ರಿ ರಾಜ್ಯ ಮತ್ತು ಅಂತರ್ ರಾಜ್ಯ ಹಾಡುಗಾರರ ಸಮ್ಮಿಲನದೊಂದಿಗೆ ಸಂಗೀತ ರಸಮಂಜರಿ ಜರುಗಲಿದ್ದು,
ರಾತ್ರಿ ಶ್ರೀ ಶಾರದಾ ದೇವಿಗೆ ವಿಶೇಷ ಹೂವಿನ ಅಲಂಕಾರದೊಂದಿಗೆ ವೈಭವದ ಮಹಾಪೂಜೆ ನಡೆಯಲಿದೆ.