ರಾಷ್ಟ್ರಮಟ್ಟದ ಕರಾಟೆ ಸ್ಪರ್ಧೆಯಲ್ಲಿ ನಿಶ್ಚಿತ್ ಪಿ. ಗೆ ಚಿನ್ನದ ಪದಕ

0

ವಿದ್ಯಾಭಾರತಿ ಕರ್ನಾಟಕ ದ.ಕ. ಜಿಲ್ಲೆ, ಇದರ ವತಿಯಿಂದ ಮಧ್ಯ ಪ್ರದೇಶದ ದೇವಾಸ್ ನಲ್ಲಿ ನಡೆದ 17ರ ವಯೋಮಾನದ ರಾಷ್ಟ್ರಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಸರಸ್ವತಿ ವಿದ್ಯಾಲಯ ಪ್ರೌಢಶಾಲೆಯ 9ನೇ ತರಗತಿ ವಿದ್ಯಾರ್ಥಿ ನಿಶ್ಚಿತ್ ಪಿ. ಚಿನ್ನದ ಪದಕ ದೊಂದಿಗೆ ಪ್ರಥಮ ಸ್ಥಾನಿಯಾಗಿ SGFI ಪಂದ್ಯಾಟಕ್ಕೆ ಆಯ್ಕೆಯಾಗಿದ್ದಾರೆ.

ಮೂಲತಃ ಸಂಪಾಜೆ ಗ್ರಾಮದ ಚೆದ್ಕಾರ್, ಪ್ರಸ್ತುತ ಕಡಬ ತಾಲೂಕಿನ 102 ನೆಕ್ಕಿಲಾಡಿ ಗ್ರಾಮದ ಪೊನ್ನೈತ್ತೂರು ಸುರೇಶ ಮತ್ತು ಚಂದ್ರಾವತಿ ದಂಪತಿಗಳ ಪುತ್ರ. ಇವರಿಗೆ ಸಂಸ್ಥೆಯ ಕರಾಟೆ ಶಿಕ್ಷಕರಾದ ಯಾದವ ಬೀರಂತಡ್ಕ ಮತ್ತು ದೈಹಿಕ ಶಿಕ್ಷಣ ಶಿಕ್ಷಕರಾದ ಲಕ್ಷ್ಮೀಶ ಗೌಡ ಆರಿಗ ತರಬೇತಿ ನೀಡಿದ್ದಾರೆ.