ಗುತ್ತಿಗಾರು : ತರಬೇತಿ ಕಾರ್ಯಗಾರ

0


ಹೊಂಬೆಳಕು ಬಳಗ ನಾಲ್ಕೂರು, ಯುವಜನ ಸಂಯುಕ್ತ ಮಂಡಳಿ ಸುಳ್ಯ, ಸರಕಾರಿ ಪದವಿಪೂರ್ವ ಕಾಲೇಜು ಗುತ್ತಿಗಾರು ಇವುಗಳ ಸಂಯುಕ್ತ ಆಶ್ರಯದಲ್ಲಿ ಆಸಕ್ತ ವಿದ್ಯಾರ್ಥಿಗಳಿಗಾಗಿ ಮತ್ತು ಪೋಷಕರಿಗೆ ಸ್ಪರ್ಧಾತ್ಮಕ ಪರೀಕ್ಷೆಗಳ ಬಗ್ಗೆ ಮಾಹಿತಿ ಕಾರ್ಯಗಾರ ಇಂದು ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಯುವಜನ ಸಂಯುಕ್ತ ಮಂಡಳಿ ಅಧ್ಯಕ್ಷ ಪ್ರವೀಣ್ ಕುಮಾರ್ ಜಯನಗರ ಗಿಡಕ್ಕೆ ನೀರು ಹಾಕುವ ಮೂಲಕ ಉದ್ಘಾಟಿಸಿದರು.


ಸಭಾ ಅಧ್ಯಕ್ಷತೆಯನ್ನು ಹೊಂಬೆಳಕು ಬಳಗ ನಾಲ್ಕೂರು ಇದರ ಅಧ್ಯಕ್ಷ ಚರಣ್ ದೇರಪ್ಪಜ್ಜನಮನೆ ವಹಿಸಿದ್ದರು. ವೇದಿಕೆಯಲ್ಲಿ ಸಂಪನ್ಮೂಲ ವ್ಯಕ್ತಿ ವಿದ್ಯಾಮಾತಾ ಅಕಾಡೆಮಿ ಇದರ ಆಡಳಿತ ನಿರ್ದೇಶಕರಾದ ಬಾಗೇಶ್ ರೈ, ಕಾಲೇಜಿನ ಪ್ರಾಂಶುಪಾಲರಾದ ಚೆನ್ನಮ್ಮ, ಪ್ರೌಢಶಾಲಾ ವಿಭಾಗದ ಮುಖ್ಯೋಪಾಧ್ಯಾಯರಾದ ನೆಲ್ಸನ್ ಕ್ಯಾಸ್ಟ್ ಲಿನೋ, ಬಳಗದ ಗೌರವ ಅಧ್ಯಕ್ಷ ಡಿ.ಆರ್. ಉದಯಕುಮಾರ್ ದೇರಪ್ಪಜ್ಜನಮನೆ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಖಜಾಂಜಿ ವಿ. ವೇಣುಗೋಪಾಲ್ ಸ್ವಾಗತಿಸಿ, ಕಾರ್ಯದರ್ಶಿ ಮದನ್ ಕೊಲ್ಯ ವಂದಿಸಿದರು.

ಯುವಜನ ಸಂಯುಕ್ತ ಮಂಡಳಿಯ ಜೊತೆ ಕಾರ್ಯದರ್ಶಿ ದಿನೇಶ್ ಹಾಲೆಮಜಲು ಕಾರ್ಯಕ್ರಮ ನಿರೂಪಿಸಿದರು. ತರಬೇತಿಯಲ್ಲಿ 150 ಮಂದಿ ಮಕ್ಕಳು ಭಾಗವಹಿಸಿದ್ದರು.

ವರದಿ : ದಿನೇಶ್ ಹಾಲೆಮಜಲು