ನ.17ರ ತನಕ ಕಳಂಜ ಸಹಕಾರಿ ಸಂಘದ ಸಭಾಂಗಣದಲ್ಲಿ ಉಚಿತ ಫೂಟ್ ಫಲ್ಸ್ ಥೆರಪಿ ಶಿಬಿರ

0

ಕಳಂಜ ಬಾಳಿಲ ಪ್ರಾ.ಕೃ.ಪ.ಸ.ಸಂಘ, ಕಳಂಜ ಗ್ರಾ.ಪಂ., ಯುವಕ ಮಂಡಲ ಕಳಂಜ, ಬಳಕೆದಾರರ ವೇದಿಕೆ ಕಳಂಜ ಮತ್ತು ಕಂಪನಿಯಾ ನೆಮ್ಮದಿ ವೆಲ್ ನೆಸ್ ಸೆಂಟರ್ ಪುತ್ತೂರು ಇವುಗಳ ಜಂಟಿ ಆಶ್ರಯದಲ್ಲಿ ಉಚಿತ ಫೂಟ್ ಫಲ್ಸ್ ಥೆರಪಿ ಶಿಬಿರ ನ. 17ರ ತನಕ ಕಳಂಜ ಬಾಳಿಲ ಪ್ರಾ.ಕೃ.ಪ.ಸ.ಸಂಘದ ಕೋಟೆಮುಂಡುಗಾರಿನ ಪ್ರಧಾನ ಕಚೇರಿಯ ಸಭಾಂಗಣದಲ್ಲಿ ನಡೆಯಲಿದೆ.


ಹೃದ್ರೋಗ ತಜ್ಞರಾದ ಡಾ. ಗೋಪಾಲ ರಾವ್ ಕಾರ್ಯಕ್ರಮ ಉದ್ಘಾಟಿಸಿದರು. ಸಂಘದ
ಅಧ್ಯಕ್ಷ ಎಂ. ಕೂಸಪ್ಪ ಗೌಡ ಮುಗುಪ್ಪು ಅಧ್ಯಕ್ಷತೆ ವಹಿಸಿದ್ದರು. ಕಳಂಜ ಗ್ರಾ.ಪಂ. ಅಧ್ಯಕ್ಷ ಬಾಲಕೃಷ್ಣ ಬೇರಿಕೆ, ಕಳಂಜ ಯುವಕ ಮಂಡಲದ ಅಧ್ಯಕ್ಷ ಶಿವರಾಮ ಕಜೆಮೂಲೆ, ಕಳಂಜ ಬಳಕೆದಾರರ ವೇದಿಕೆಯ ಅಧ್ಯಕ್ಷ ಈಶ್ವರ ವಾರಣಾಶಿ, ಕಳಂಜ ಬಾಳಿಲ ಪ್ರಾ.ಕೃ.ಪ.ಸ.ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಮೇಶ್ ನಾಯಕ್ ತಡಗಜೆ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ವೇದಿಕೆಯಲ್ಲಿ ಉಪಸ್ಥಿತರಿದ್ದ ನೆಮ್ಮದಿ ವೆಲ್ ನೆಸ್ ಸೆಂಟರಿನ ಪ್ರಭಾಕರ ಸಾಲ್ಯಾನ್ ಶಿಬಿರದ ಬಗ್ಗೆ ಮಾಹಿತಿ ನೀಡಿದರು. ಈಶ್ವರ ವಾರಣಾಶಿ ಸ್ವಾಗತಿಸಿ, ಶಿವರಾಮ ಕಜೆಮೂಲೆ ವಂದಿಸಿದರು. ಸಂಘದ ಸಿಬ್ಬಂದಿ ಗೀತಾಶ್ರೀ ಎಂ. ಕಾರ್ಯಕ್ರಮ ನಿರೂಪಿಸಿದರು.

ನೆಮ್ಮದಿ ವೆಲ್ ನೆಸ್ ಸೆಂಟರ್ ನ ಪ್ರಶಾಂತ್, ಶ್ರೀಮತಿ ಸಂಧ್ಯಾ ಮತ್ತು ಶ್ರೀಮತಿ ಪ್ರಮೀಳಾ ಸಹಕಾರ ನೀಡಿದರು ಶಿಬಿರ ಪ್ರತೀ ದಿನ ಬೆಳಿಗ್ಗೆ 9.30ರಿಂದ ಸಂಜೆ 4.30ರ ತನಕ ನಡೆಯಲಿದೆ.